Webdunia - Bharat's app for daily news and videos

Install App

Karnataka Weather: ದಕ್ಷಿಣ ಕನ್ನಡದವರಿಗೆ ಎಚ್ಚರಿಕೆ, ಇಂದಿನ ಹವಾಮಾನ ತಪ್ಪದೇ ಗಮನಿಸಿ

Krishnaveni K
ಗುರುವಾರ, 10 ಏಪ್ರಿಲ್ 2025 (08:36 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮುಂಗಾರುಪೂರ್ವ ಮಳೆಯಾಗುತ್ತಿದ್ದು, ಉಳಿದಂತೆ ಬಿಸಿಲಿನ ವಾತಾವರಣವಿದೆ. ವಿಶೇಷವಾಗಿ ದಕ್ಷಿಣ ಕನ್ನಡದವರಿಗೆ ಇಂದು ಹವಾಮಾನ ವರದಿ ತಪ್ಪದೇ ಗಮನಿಸಬೇಕಾಗುತ್ತದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ ನೋಡಿ.

ಅದರಲ್ಲೂ ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಲೇ ಇದೆ. ನಿನ್ನೆ ಹಾಗೂ ಮೊನ್ನೆಯೂ ವಿಪರೀತ ಗಾಳಿ ಮಳೆ ಕಂಡುಬಂದಿತ್ತು. ಇಂದೂ ಕೂಡಾ ಈ ಜಿಲ್ಲೆಯಲ್ಲಿ ಭಾರೀ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ.

ದಕ್ಷಿಣ ಕನ್ನಡ ಜೊತೆಗೆ ಕೊಡಗಿನಲ್ಲೂ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಇಂದು ತಕ್ಕಮಟ್ಟಿಗೆ ಮಳೆ ನಿರೀಕ್ಷಿಸಲಾಗಿದೆ.

ಆದರೆ ಉಳಿದಂತೆ ಮಂಡ್ಯ, ಮೈಸೂರು, ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ತುಮಕೂರು, ಹಾವೇರಿ, ಶಿವಮೊಗ್ಗ, ಉತ್ತರ ಕನ್ನಡ, ಕಲಬುರಗಿ, ಬೀದರ್, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಭಾಗಗಳಲ್ಲಿ ಎಂದಿನಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಕರ್ನಾಟಕದಲ್ಲಿ ಇಂದು ಸರಾಸರಿ ಗರಿಷ್ಠ ತಾಪಮಾನ 32 ರಿಂದ 33 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments