Webdunia - Bharat's app for daily news and videos

Install App

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

Krishnaveni K
ಶನಿವಾರ, 19 ಏಪ್ರಿಲ್ 2025 (08:40 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಮತ್ತು ಬಿಸಿಲಿನ ಕಣ್ಣಾಮುಚ್ಚಾಲೆ ನಡೆದಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಿಗೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆ ಕಳೆದ ವಾರ ಉತ್ತಮ ಮಳೆಯಾಗಿತ್ತು. ಆದರೆ ಇದೀಗ ವಾರಂತ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇಂದು ಬಹುತೇಕ ಕಡೆ ಮಳೆಯ ಸಾಧ್ಯತೆ ಕಡಿಮೆ. ಆದರೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

ದಕ್ಷಿಣ ಕನ್ನಡದಲ್ಲಿ ಕಳೆದ ವಾರ ಮತ್ತು ಈ ವಾರದ ಆರಂಭದಲ್ಲಿ ಭಾರೀ ಮಳೆಯಾಗಿತ್ತು. ಬಳಿಕ ಮಳೆ ಕೊಂಚ ಕ್ಷೀಣವಾಗಿದೆ. ಇದೀಗ ತಾಪಮಾನ ಗರಿಷ್ಠ ಮಟ್ಟದಲ್ಲೇ ಇದೆ. ಇಂದು ಮತ್ತು ನಾಳೆ ಈ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಬಹುತೇಕ ಬಿಸಿಲಿನ ವಾತಾವರಣವಿರುವುದು.

ಆದರೆ ಕೊಡಗು, ಚಾಮರಾಜನಗರ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಉಳಿದಂತೆ ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 33-34 ಡಿಗ್ರಿಯವರೆಗೆ ತಲುಪುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಮುಂದಿನ ಸುದ್ದಿ
Show comments