Select Your Language

Notifications

webdunia
webdunia
webdunia
webdunia

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

Karnataka Rain

Krishnaveni K

ಬೆಂಗಳೂರು , ಗುರುವಾರ, 20 ನವೆಂಬರ್ 2025 (08:42 IST)
ಬೆಂಗಳೂರು: ರಾಜ್ಯದಲ್ಲಿ ಈಗ ಹವಾಮಾನದಲ್ಲಿ ತೀವ್ರ ಬದಲಾವಣೆಯಾಗುತ್ತಲೇ ಇದೆ. ಇಂದು ಯಾವ ಜಿಲ್ಲೆಗೆ ಮಳೆ, ಯಾವ ಜಿಲ್ಲೆಗೆ ಚಳಿ ಇಲ್ಲಿದೆ ಹವಾಮಾನ ವರದಿ.

ಚಳಿಗಾಲ ಬಂದರೂ ರಾಜ್ಯದಲ್ಲಿ ಮಳೆಗಾಲದ ಪರ್ವ ನಿಂತಿಲ್ಲ. ಈ ವಾರವೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಅದರಲ್ಲೂ ವಾರಂತ್ಯದಲ್ಲಿ ಬಹುತೇಕ ಕಡೆ ಮಳೆಯಿರಲಿದೆ. ಆದರೆ ಇಂದು ಬಹುತೇಕ ಕಡೆ ಮೋಡ ಕವಿದ ವಾತಾವರಣ ಮತ್ತು ಚಳಿಯಿರಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಹಾವೇರಿ, ಚಿತ್ರದುರ್ಗ, ರಾಯಚೂರು, ದಾವಣಗೆರೆ, ಬಾಗಲಕೋಟೆ, ಶಿವಮೊಗ್ಗ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬೆಳಗಾವಿ, ಯಾದಗಿರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲು ಮತ್ತು ಮೋಡದ ವಾತಾವರಣವಿರಲಿದೆ.

ಆದರೆ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ. ಇಂದು ಸರಾಸರಿ ಕನಿಷ್ಠ ತಾಪಮಾನ 18 ಡಿಗ್ರಿಯಷ್ಟಾಗಲಿದೆ. ಆದರೆ ವಾರಂತ್ಯಕ್ಕೆ ಮತ್ತೆ ಮಳೆಯ ಸೂಚನೆಯಿದ್ದು ಮುಂದಿನ ವಾರದವರೆಗೆ ಮುಂದುವರಿಯುವ ಸಾಧ್ಯತೆಯಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ