Daily Horoscope

Karnataka Weather: ಮಳೆ ಯಾವಾಗ ಶುರು ಎಂದು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

Krishnaveni K
ಶುಕ್ರವಾರ, 21 ಮಾರ್ಚ್ 2025 (08:46 IST)
ಬೆಂಗಳೂರು: ಕರ್ನಾಟಕದಲ್ಲಿ ಸತತ ಬಿಸಿಲಿನಿಂದ ತತ್ತರಿಸಿರುವ ಜನ ಈಗ ಮಳೆ ಯಾವಾಗ ಎಂದು ಕಾಯುವಂತಾಗಿದೆ. ಮಳೆಗಾಗಿ ಕಾಯುತ್ತಿದ್ದ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದೆ.

ರಾಜ್ಯದಲ್ಲಿ ಈಗ ತಾಪಮಾನ ಕೆಲವೆಡೆಯಂತೂ 38-40 ಡಿಗ್ರಿಯವರೆಗೂ ತಲುಪಿದ್ದು ಇದೆ. ಮಧ್ಯಾಹ್ನದ ವೇಳೆ ಹೊರಗೆ ಕಾಲಿಡಲೂ ಆಗದಷ್ಟು ಬಿಸಿಲು ಕಂಡುಬರುತ್ತಿದೆ. ಕೆಲವೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹೀಗಾಗಿ ಈ ವರ್ಷ ಸಾಕಷ್ಟು ಮಳೆಯಾಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಈ ನಡುವೆ ಹವಾಮಾನ ಇಲಾಖೆ ರಾಜ್ಯದ ಜನರಿಗೆ ಗುಡ್ ನ್ಯೂಸ್ ಒಂದನ್ನು ಕೊಟ್ಟಿದೆ. ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮುಂದಿನ ಒಂದು ವಾರ ಕಾಲ ಮಳೆಯ ಆಗಮನ ಖುಷಿ ಕೊಡಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ನಾಳೆಯಿಂದ ನಾಲ್ಕೈದು ದಿನಗಳವರೆಗೆ ರಾಜ್ಯದ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗಲಿದೆ.

ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳವರೆಗೆ ಮಳೆ ಸುರಿಯುವ ಸೂಚನೆಯಿದೆ. ಆದರೆ ಉಳಿದೆಡೆ ಯಥಾ ಪ್ರಕಾರ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments