Webdunia - Bharat's app for daily news and videos

Install App

Karnataka Weather: ಈ ವಾರ ಈ ಜಿಲ್ಲೆಗಳಿಗೆ ಕಾದಿದೆ ಭರ್ಜರಿ ಮಳೆ, ಈ ವಾರದ ಹವಾಮಾನ ವರದಿ ಇಲ್ಲಿದೆ

Krishnaveni K
ಸೋಮವಾರ, 14 ಏಪ್ರಿಲ್ 2025 (09:50 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರ ಕೆಲವು ಕಡೆ ವಿಪರೀತ ಮಳೆಯಾಗಿತ್ತು. ಈ ವಾರವೂ ಕೆಲವು ಜಿಲ್ಲೆಗಳಿಗೆ ಭರ್ಜರಿ ಮಳೆ ಕಾದಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಕನ್ನಡಕ್ಕೆ ಕಳೆದ ವಾರ ಭರ್ಜರಿ ಮಳೆಯಾಗಿತ್ತು. ಇದಲ್ಲದೆ ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿತ್ತು. ಇದರ ಹೊರತಾಗಿ ಬೆಂಗಳೂರು, ಮೈಸೂರಿನಲ್ಲಿ ಅಲ್ಪ ಪ್ರಮಾಣದ ಮಳೆಯಾಗಿತ್ತು.

ಈ ವಾರ ರಾಜ್ಯದ ಕೆಲವು ಜಿಲ್ಲೆಗಳಿಗೆ ಭರ್ಜರಿ ಮಳೆಯಾಗುವ ಸೂಚನೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಈ ವಾರವೂ ಭಾರೀ ಮಳೆಯ ಸೂಚನೆಯಿದೆ. ಇಂದು ಕರ್ನಾಟಕದಲ್ಲಿ ಒಂದು ದಿನದ ಮಟ್ಟಿಗೆ ಮಳೆಗೆ ಬಿಡುವು. ಆದರೆ ನಾಳೆಯಿಂದ ಬಹುತೇಕ ಕಡೆ ಮಳೆಯಾಗುವ ಸೂಚನೆಯಿದೆ.

ದಕ್ಷಿಣ ಕನ್ನಡ, ಕೊಡಗಿನಲ್ಲಿ ಮಂಗಳವಾರದಿಂದ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ. ಇನ್ನು, ಚಾಮರಾಜನಗರ, ಕೋಲಾರ, ಮಂಡ್ಯ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಈ ವಾರ ಕೆಲವು ದಿನ ಸಣ್ಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಈ ವಾರ ಬಿಸಿಲಿನ ತಾಪ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments