Webdunia - Bharat's app for daily news and videos

Install App

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

Krishnaveni K
ಶನಿವಾರ, 21 ಜೂನ್ 2025 (08:27 IST)
ಬೆಂಗಳೂರು: ರಾಜ್ಯದಲ್ಲಿ ಈಗ ಎರಡು ದಿನದಿಂದ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿದೆ ಎನ್ನಬಹುದು. ಇಂದು ಮಳೆಯ ಬರುವ ಸಾಧ್ಯತೆ ಎಷ್ಟಿದೆ ಎಂದು ಇಂದಿನ ಹವಾಮಾನ ವರದಿ ಗಮನಿಸಿ.

ಕಳೆದ ವಾರವಿಡೀ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿತ್ತು. ವಾರಂತ್ಯದ ವೇಳೆಗೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗಿತ್ತು. ಇದೀಗ ನಿನ್ನೆ ಮತ್ತು ಇಂದು ಈ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಅಪರೂಪಕ್ಕೆ ತುಂತುರು ಮಳೆ ಬಿಟ್ಟರೆ ಬಹುತೇಕ ಮೋಡ ಕವಿದ ವಾತಾವರಣವಿತ್ತು. ಇಂದೂ ಅದೇ ವಾತಾವರಣ ಮುಂದುವರಿಯಲಿದೆ. ಇಂದೂ ಮಳೆಯ ಸಾಧ್ಯತೆಯಿಲ್ಲ. ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿತ್ತು. ಆದರೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆಯಿದೆಯಷ್ಟೇ.

ಉಳಿದಂತೆ ಕೋಲಾರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕಲಬುರಗಿ, ಕೊಪ್ಪಳ ಜಿಲ್ಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಇಂದು ರಾಜ್ಯದ ಗರಿಷ್ಠ ಉಷ್ಣಾಂಶ 29 ಡಿಗ್ರಿಯಷ್ಟು ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಮುಂದಿನ ಸುದ್ದಿ
Show comments