Select Your Language

Notifications

webdunia
webdunia
webdunia
webdunia

Karnataka Weather: ರಾಜ್ಯದಲ್ಲಿ ವಾರಂತ್ಯಕ್ಕೆ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

Karnataka Rains
ಬೆಂಗಳೂರು: ಕರ್ನಾಟಕದಲ್ಲಿ ಈ ವಾರದಾದ್ಯಂತ ಹಲವು ಕಡೆ ಮಳೆಯಾಗಿತ್ತು. ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯ ಸೂಚನೆಯಿದೆಯಾ ಇಲ್ಲಿದೆ ಹವಾಮಾನ ವರದಿ.

ನಿನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಸಣ್ಣ ಮಳೆಯಾಗಿತ್ತು. ಇಂದೂ ಅದೇ ರೀತಿಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಇಂದೂ ಕೆಲವೇ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಬಹುದು. ಅಲ್ಲದೆ ಕೊಡಗು, ಹಾಸನ ಜಿಲ್ಲೆಗಳಲ್ಲಿ ನಾಳೆ ತುಂತುರು ಮಳೆಯಾಗಲಿದೆ. ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ, ರಾಯಚೂರು, ಬಳ್ಳಾರಿ, ಶಿವಮೊಗ್ಗ, ಬೀದರ್, ವಿಜಯಪುರ, ದಾವಣಗೆರೆ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ.

ಉಳಿದ ಜಿಲ್ಲೆಗಳಲ್ಲಿ ಎರಡೂ ದಿನ ಬಿಸಿಲಿನ ವಾತಾವರಣವಿರಲಿದೆ. ಇಂದು ರಾಜ್ಯ ಮತ್ತು ನಾಳೆ ರಾಜ್ಯದ ಗರಿಷ್ಠ ತಾಪಮಾನ 32-33 ಡಿಗ್ರಿಯಷ್ಟು ಕಂಡುಬರಲಿದೆ. ಕನಿಷ್ಠ ತಾಪಮಾನ 22 ಡಿಗ್ರಿಯಷ್ಟು ಕಂಡುಬರುವುದು.


Share this Story:

Follow Webdunia kannada

ಮುಂದಿನ ಸುದ್ದಿ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ