Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

Krishnaveni K
ಶುಕ್ರವಾರ, 21 ಮಾರ್ಚ್ 2025 (08:09 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಇಂದು ರಾಜ್ಯದಲ್ಲಿ ಮಳೆಯಿದೆಯೇ, ಲೇಟೆಸ್ಟ್ ಹವಾಮಾನ ವರದಿ ಏನು ಹೇಳುತ್ತದೆ ನೋಡಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಮತ್ತು ಮೊನ್ನೆ ಮಳೆಯಾಗಿತ್ತು. ಉಡುಪಿ ಜಿಲ್ಲೆಯಲ್ಲೂ ಮೊನ್ನೆ ಮಳೆಯಾಗಿತ್ತು. ರಾಜ್ಯದ್ಯಂತ ನಿರೀಕ್ಷೆಯಂತೇ ಉತ್ತಮವಾಗಿ ಬೇಸಿಗೆ ಮಳೆಯಾಗುತ್ತಿದೆ. ಹಾಗಿದ್ದರೂ ತಾಪಮಾನ ಏನೂ ಕಡಿಮೆಯಿಲ್ಲ.

ಈ ನಡುವೆ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಣ್ಣ ಮಳೆಯಾಗುವ ಸೂಚನೆಯಿದೆ. ಉಳಿದಂತೆ ಕೊಡಗು, ಹಾಸನ, ಮೈಸೂರು ಸೇರಿದಂತೆ ಬಹುತೇಕ ಕಡೆ ಬಿಸಿಲು ಮತ್ತು ಸ್ವಲ್ಪ ಮೋಡ ಕವಿದ ವಾತಾವರಣವಿರಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಮಳೆಯ ಸೂಚನೆಯಿಲ್ಲ. ನಿನ್ನೆಯೂ ವಿಪರೀತ ಬಿಸಿಲು ಕಂಡುಬಂದಿತ್ತು. ಇಂದೂ ಗರಿಷ್ಠ ತಾಪಮಾನ 32 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ. ಉಳಿದಂತೆ ಬಿರು ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments