Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಇಂದು ಮಳೆಯಿದೆಯೇ ಇಲ್ಲಿದೆ ಹವಾಮಾನ ವರದಿ

Krishnaveni K
ಶುಕ್ರವಾರ, 14 ಮಾರ್ಚ್ 2025 (08:30 IST)
ಬೆಂಗಳೂರು: ಕಳೆದ ಎರಡು ದಿನಗಳಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಿದ್ದು ನಿನ್ನೆಯೂ ಮೋಡ ಕವಿದ ವಾತಾವರಣವಿತ್ತು. ಇಂದು ಮಳೆಯಾಗುವ ಸಾಧ್ಯತೆಯೇ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.

ಮಾರ್ಚ್ 11 ರಿಂದ 12 ರವರೆಗೆ ಎರಡು ದಿನ ದಕ್ಷಣಿ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಅದರಲ್ಲೂ ವಿಪರೀತ ತಾಪಮಾನ ಏರಿಕೆಯಾಗಿದ್ದ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು.

ಆದರೆ ಈ ವಾರದಲ್ಲಿ ಮತ್ತೆ ಮಳೆಯಾಗುವ ಸೂಚನೆ ಕಂಡುಬರುತ್ತಿಲ್ಲ. ನಿನ್ನೆಯಿಂದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಇಂದೂ ಅದೇ ವಾತಾವರಣ ಮುಂದುವರಿಯಲಿದೆ. ಇಂದೂ ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಈ ವಾರವಿಡೀ ಅಪರೂಪಕ್ಕೆ ಮೋಡ ಮತ್ತು ಬಿಸಿಲಿನ ವಾತಾವರಣವಿರಲಿದೆ.

ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ತಾಪಮಾನ 40 ರ ಆಸುಪಾಸಿಗೆ ಬಂದು ನಿಲ್ಲಲಿದೆ. ರಾಜ್ಯದಲ್ಲಿ ಇನ್ನು ಒಂದು ವಾರಗಳ ಕಾಲ ಇದೇ ವಾತಾವರಣ ಮುಂದುವರಿಯಬಹುದು ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments