Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆ, ದಕ್ಷಿಣ ಕನ್ನಡಕ್ಕೆ ವಿಶೇಷ ಎಚ್ಚರಿಕೆ

Krishnaveni K
ಶನಿವಾರ, 12 ಏಪ್ರಿಲ್ 2025 (07:46 IST)
ಬೆಂಗಳೂರು: ರಾಜ್ಯದಲ್ಲಿ ಇದೀಗ ಮುಂಗಾರು ಪೂರ್ವ ಮಳೆಯ ಆಗಮನವಾಗಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೊಂದೆಡೆ ತಾಪಮಾನವೂ ಗರಿಷ್ಠ ಮಟ್ಟದಲ್ಲಿದೆ. ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗಲಿದೆ ಮತ್ತು ದಕ್ಷಿಣ ಕನ್ನಡಕ್ಕೆ ವಿಶೇಷವಾಗಿ ಹವಾಮಾನ ವರದಿಗಳು ನೀಡುತ್ತಿರುವ ಎಚ್ಚರಿಕೆಯೇನು ಇಲ್ಲಿದೆ ನೋಡಿ ವಿವರ.

ಕರ್ನಾಟಕದ ಬಹುತೇಕ ಕಡೆ ಈಗಾಗಲೇ ಮುಂಗಾರು ಪೂರ್ವ ಮಳೆಯ ಆಗಮನವಾಗಿದೆ. ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೆಲವು ಕಡೆ ಹನಿ ಮಳೆಯಾಗಿತ್ತು. ಇಂದೂ ಕೂಡಾ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಿಗೆ ಮಳೆಯ ಸೂಚನೆಯಿದೆ.

ದಕ್ಷಿಣ ಕನ್ನಡದಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ನಿನ್ನೆಯೂ ಬೆಳ್ಳಂ ಬೆಳಿಗ್ಗೆಯೇ ಮಳೆರಾಯನ ಅಬ್ಬರವಿತ್ತು. ಇಂದೂ ದಕ್ಷಿಣ ಕನ್ನಡದಲ್ಲಿ ಮಳೆಯ ಸೂಚನೆಯಿದೆ. ನಿನ್ನೆ ಗುಡುಗು ಸಹಿತ ಮಳೆಯಾಗಿತ್ತು. ಇಂದೂ ಕೂಡಾ ಹೆಚ್ಚು ಕಡಿಮೆ ಇದೇ ವಾತಾವರಣವಿರಲಿದೆ. ಇನ್ನೊಂದು ವಾರಗಳಿಗೆ ಕರಾವಳಿ ಜಿಲ್ಲೆಯಲ್ಲಿ ಮಳೆಯ ಅಬ್ಬರವಿರಲಿದ್ದು, ಕಡಲ ತೀರಗಳಿಗೆ ಹೋಗದೇ ಇರುವುದು ಉತ್ತಮ.

ಉಳಿದಂತೆ ಇಂದು ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಿಗೂ ಇಂದು ಮಳೆಯಾಗುವ ಸೂಚನೆಯಿದೆ. ಉಳಿದಂತೆ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 32 ಡಿಗ್ರಿ ತಲುಪುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments