ಬೆಂಗಳೂರು: ರಾಜ್ಯ ಈಗ ಮಳೆಗಾಲ ಮುಗಿದು ಚಳಿಗಾಲದತ್ತ ಮುಗ್ಗಲು ಬದಲಿಸುತ್ತಿದೆ. ಈ ನಡುವೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದರೆ ಮತ್ತೆ ಕೆಲವೇ ಜಿಲ್ಲೆಯಲ್ಲಿ ತುಂತುರು ಮಳೆಯ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣವಿದ್ದರೆ ಬೆಂಗಳೂರಿನಲ್ಲಿ ಚಳಿಯ ವಾತಾವರಣವಿರಲಿದೆ. ಇನ್ನು ಕೆಲವೊಂದು ಜಿಲ್ಲೆಗಳಲ್ಲಿ ಮಾತ್ರ ತುಂತುರು ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕೊಡಗು ಜಿಲ್ಲೆಗೆ ಮಾತ್ರ ಇಂದು ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆಯಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿಲ್ಲ ಎಂದು ಹವಾಮಾನ ವರದಿಗಳು ಹೇಳಿವೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಗದಗ, ಹಾವೇರಿ, ಬೀದರ್, ರಾಯಚೂರು, ಕೊಪ್ಪಳ, ಚಿತ್ರದುರ್ಗ, ಕಲಬುರಗಿ, ಬೆಳಗಾವಿ, ವಿಜಯಪುರ, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ಬಹುತೇಕ ಜಿಲ್ಲೆಗಳಿಗೆ ಇಂದು ಬಿಸಿಲಿನ ವಾತಾವರಣವಿರಲಿದೆ.