Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Krishnaveni K
ಸೋಮವಾರ, 16 ಜೂನ್ 2025 (08:21 IST)
ಬೆಂಗಳೂರು: ರಾಜ್ಯದಾದ್ಯಂತ ಕಳೆದ ವಾರಂತ್ಯಕ್ಕೆ ಭಾರೀ ಮಳೆಯಾಗಿತ್ತು. ಇಂದೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಈ ವಾರದ ಹವಾಮಾನ ಬದಲಾವಣೆಗಳೇನು ಇಲ್ಲಿದೆ ನೋಡಿ ಲೇಟೆಸ್ಟ್ ವರದಿ.

ಮೇ ಕೊನೆಯ ವಾರದಲ್ಲಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ವರುಣ ಬಳಿಕ ಜೂನ್ ಮೊದಲ ವಾರ ಬ್ರೇಕ್ ಕೊಟ್ಟಿತ್ತು. ಇದಾದ ಬಳಿಕ ಕಳೆದ ವಾರ ಮತ್ತೆ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ.

ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮೊದಲಾದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ವಾತಾವರಣವಿರಲಿದೆ. ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಈ ವಾರ ಮಂಗಳವಾರದವರೆಗೂ ಮಳೆಯ ವಾತಾವರಣವಿರಲಿದೆ.

ಇದಾದ ಬುಧವಾರದಿಂದ ಕೆಲವು ಕಡೆ ಮಳೆಯ ಅಬ್ಬರ ಕಡಿಮೆಯಾಗುವುದು. ಹಾಗಿದ್ದರೂ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಈ ವಾರವಿಡೀ ಮಳೆ ಮುಂದುವರಿಯಲಿದೆ. ಆದರೆ ಕಲಬರುಗಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಚಾಮರಾಜನಗರ, ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ವಾರದ ಮಧ್ಯ ಭಾಗದಿಂದ ಮಳೆಯ ಅಬ್ಬರ ತಕ್ಕ ಮಟ್ಟಿಗೆ ಕಡಿಮೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಾನ್ಸೂನ್ ಬಳಿಕ ದೆಹಲಿ ವಾಯು ಗುಣಮಟ್ಟದಲ್ಲಿ ಊಹಿಸಲಾಗದ ಬದಲಾವಣೆ

ಭೀಮಾತೀರದ ರೌಡಿಶೀಟರ್‌ ತುಳಸಿರಾಮನ ಪರ ಮಹತ್ವದ ಆದೇಶ

ಈ ದುರಂತವು ಇನ್ನೂ ತನ್ನನ್ನು ಬಾಧಿಸುತ್ತಿದೆ: ವಿಜಯ್ ದಳಪತಿ

ಸುಪ್ರೀಂಕೋರ್ಟ್ ನಲ್ಲಿ ಇಂದು ರದ್ದಾಂತ: ನಿಜಕ್ಕೂ ಏನಾಯ್ತು ಈ ವಿಡಿಯೋ ನೋಡಿ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments