Select Your Language

Notifications

webdunia
webdunia
webdunia
webdunia

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಈ ದಿನದಿಂದ ಬೇಸಿಗೆ ಆರಂಭಕ್ಕೆ ಮುನ್ನ ಮಳೆ

Bangalore Rains
ಬೆಂಗಳೂರು: ಕರ್ನಾಟಕದಲ್ಲಿ ಈಗ ಹವಾಮಾನ ನಿಧಾನವಾಗಿ ಬದಲಾಗುತ್ತಿದ್ದು, ಬೇಸಿಗೆ ಆರಂಭಕ್ಕೆ ಮುನ್ನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ.
 

ನಿನ್ನೆಯವರೆಗೆ ರಾಜ್ಯದಲ್ಲಿ ವಿಪರೀತ ಚಳಿಯ ವಾತಾವರಣವಿತ್ತು. ಆದರೆ ಇಂದಿನಿಂದ ವಾತಾವರಣದಲ್ಲಿ ಕೊಂಚ ಬದಲಾವಣೆಯಾಗಲಿದ್ದು, ತಾಪಮಾನ ಕೊಂಚ ಏರಿಕೆಯಾಗಲಿದೆ. ಇಂದಿನಿಂದ ಕನಿಷ್ಠ ತಾಪಮಾನ 19 ಡಿಗ್ರಿಗೆ ತಲುಪಲಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್ ಗೆ ತಲುಪಲಿದೆ. ಹೀಗಾಗಿ ಇಂದಿನಿಂದ ಕೊಂಚ ಸೆಖೆ ಕಂಡುಬಂದೀತು.

ಇಂದಿನಿಂದ ತಾಪಾಮನದಲ್ಲಿ ದಿನೇ ದಿನೇ ಏರಿಕೆಯಾಗಲಿದೆ. ಹಾಗಂತ ಚಿಂತೆ ಬೇಡ. ಫೆಬ್ರವರಿ ಆರಂಭದಲ್ಲೇ ಬೇಸಿಗೆ ಆರಂಭಕ್ಕೆ ಮುನ್ನ ಮಳೆಯಾಗಲಿದೆ. ಫೆಬ್ರವರಿ 1,2 ರಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ.

ಯಾವ ಜಿಲ್ಲೆಗಳಿಗೆ ಮಳೆ?
ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಉಳಿದಂತೆ ಉತ್ತರ ಕನ್ನಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ಕಲಬುರಗಿ, ಧಾರವಾಡ, ವಿಜಯನಗರ, ತುಮಕೂರು, ಬೀದರ್, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಎಂದಿನಂತೆ ಚಳಿಯ ವಾತಾವರಣ ಮುಂದುವರಿಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಿಮಳಾ ಆಗ್ರೊ ಫುಡ್‌ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ: ಇಬ್ಬರು ಸಾವು