Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಈ ದಿನದಿಂದ ಬೇಸಿಗೆ ಆರಂಭಕ್ಕೆ ಮುನ್ನ ಮಳೆ

Krishnaveni K
ಬುಧವಾರ, 29 ಜನವರಿ 2025 (08:51 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಹವಾಮಾನ ನಿಧಾನವಾಗಿ ಬದಲಾಗುತ್ತಿದ್ದು, ಬೇಸಿಗೆ ಆರಂಭಕ್ಕೆ ಮುನ್ನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ.
 

ನಿನ್ನೆಯವರೆಗೆ ರಾಜ್ಯದಲ್ಲಿ ವಿಪರೀತ ಚಳಿಯ ವಾತಾವರಣವಿತ್ತು. ಆದರೆ ಇಂದಿನಿಂದ ವಾತಾವರಣದಲ್ಲಿ ಕೊಂಚ ಬದಲಾವಣೆಯಾಗಲಿದ್ದು, ತಾಪಮಾನ ಕೊಂಚ ಏರಿಕೆಯಾಗಲಿದೆ. ಇಂದಿನಿಂದ ಕನಿಷ್ಠ ತಾಪಮಾನ 19 ಡಿಗ್ರಿಗೆ ತಲುಪಲಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್ ಗೆ ತಲುಪಲಿದೆ. ಹೀಗಾಗಿ ಇಂದಿನಿಂದ ಕೊಂಚ ಸೆಖೆ ಕಂಡುಬಂದೀತು.

ಇಂದಿನಿಂದ ತಾಪಾಮನದಲ್ಲಿ ದಿನೇ ದಿನೇ ಏರಿಕೆಯಾಗಲಿದೆ. ಹಾಗಂತ ಚಿಂತೆ ಬೇಡ. ಫೆಬ್ರವರಿ ಆರಂಭದಲ್ಲೇ ಬೇಸಿಗೆ ಆರಂಭಕ್ಕೆ ಮುನ್ನ ಮಳೆಯಾಗಲಿದೆ. ಫೆಬ್ರವರಿ 1,2 ರಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ.

ಯಾವ ಜಿಲ್ಲೆಗಳಿಗೆ ಮಳೆ?
ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಉಳಿದಂತೆ ಉತ್ತರ ಕನ್ನಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ಕಲಬುರಗಿ, ಧಾರವಾಡ, ವಿಜಯನಗರ, ತುಮಕೂರು, ಬೀದರ್, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಎಂದಿನಂತೆ ಚಳಿಯ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments