Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ಇಂದಿನಿಂದ ಹವಾಮಾನದಲ್ಲಿ ಬದಲಾವಣೆ, ಈ ದಿನಗಳಲ್ಲಿ ಮಳೆ ಖಚಿತ

Krishnaveni K
ಸೋಮವಾರ, 27 ಜನವರಿ 2025 (09:58 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಈ ಒಂದು ಸಣ್ಣ ಬದಲಾವಣೆ ಕಂಡುಬರಬಹುದು ಎಂದು ಹವಾಮಾನ ವರದಿ ಹೇಳುತ್ತಿದೆ. ಜೊತೆಗೆ ಮಳೆಯ ಸಾಧ್ಯತೆಯೂ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

ಕಳೆದ ವಾರವಿಡೀ ಕರ್ನಾಟಕದಲ್ಲಿ ವಿಪರೀತ ಚಳಿಯಿತ್ತು. ಅದರಲ್ಲೂ ಕರ್ನಾಟಕದ ಉತ್ತರ ಒಳನಾಡಿನಲ್ಲಿ ತಾಪಮಾನ ವಿಪರೀತ ಇಳಿಕೆಯಾಗಿತ್ತು. ಆದರೆ ಇಂದಿನಿಂದ ಹವಾಮಾನದಲ್ಲಿ ಮತ್ತೆ ಕೊಂಚ ಬದಲಾವಣೆಯಾಗಲಿದೆ ಎಂದು ಸೂಚನೆ ಸಿಕ್ಕಿದೆ.

ಇದುವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲೆಡೆ ತಾಪಮಾನ 16-18 ಡಿಗ್ರಿಯಷ್ಟಿತ್ತು. ಕಳೆದ ವಾರ ಮಳೆಯ ಜೊತೆ ವಿಪರೀತ ಮಂಜು ಬೀಳುತ್ತಿತ್ತು. ಆದರೆ ಈ ವಾರದಿಂದ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದೆ. ಒಣ ಹವೆ ಪ್ರಭಾವ ಹೆಚ್ಚಾಗಲಿದ್ದು, ತಾಪಮಾನವೂ ಏರಿಕೆಯಾಗಲಿದೆ.

ಈ ವಾರವೂ ಮೋಡ ಮತ್ತು ಸೂರ್ಯನ ನಡುವೆ ಕಣ್ಣಾಮುಚ್ಚಾಲೆ ಮುಂದುವರಿಯಲಿದೆ. ಆದರೆ ತಾಪಮಾನದಲ್ಲಿ ಎರಡರಿಂದ ಮೂರು ಡಿಗ್ರಿಯಷ್ಟು ಏರಿಕೆ ಕಂಡುಬರುವ ಸಾಧ್ಯತೆಯಿದೆ. ಚಳಿ ಕೊಂಚ ಕಡಿಮೆಯಾಗಲಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ಸಿಕ್ಕಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಫೆಬ್ರವರಿ 1, 2 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಬಾಗಲಕೋಟೆ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿಮೊಗ್ಗ, ಚಿತ್ರದುರ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments