Webdunia - Bharat's app for daily news and videos

Install App

Karnataka Weather: ಈ ವಾರವೂ ಮಳೆಯಿರುತ್ತಾ, ಇಲ್ಲಿದೆ ವಾರದ ಹವಾಮಾನ ವರದಿ

Krishnaveni K
ಸೋಮವಾರ, 8 ಸೆಪ್ಟಂಬರ್ 2025 (08:12 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರವಿಡೀ ರಾಜ್ಯಾದ್ಯಂತ ಭಾರೀ ಮಳೆ ಕಂಡುಬಂದಿತ್ತು. ಈ ವಾರವೂ ಇರುತ್ತಾ ಮಳೆಯ ಅಬ್ಬರ ಇಲ್ಲಿದೆ ವಾರದ ಹವಾಮಾನ ವರದಿ.

ರಾಜ್ಯದಲ್ಲಿ ಕಳೆದ ವಾರ ವಾಯುಭಾರ ಕುಸಿತದ ಪರಿಣಾಮ ಬಹುತೇಕ ಕಡೆ ಮಳೆಯಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳು, ಮಲೆನಾಡಿನಲ್ಲಿ ಎಡೆಬಿಡದೇ ಮಳೆಯಾಗಿತ್ತು. ಇದು ವಾರಂತ್ಯದವರೆಗೂ ಮುಂದುವರಿದಿತ್ತು.

ಆದರೆ ಈ ವಾರ ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ವಾರದ ಕೊನೆಯಲ್ಲಿ ಮಾತ್ರ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆಯಷ್ಟೇ. ವಾರದ ಆರಂಭದಲ್ಲಿ ಬಹುತೇಕ ಕಡೆ ಬಿಸಿಲಿನ ವಾತಾವರಣವಿರಲಿದೆ.

ಈ ಬಾರಿ ಅತೀ ಹೆಚ್ಚು ಮಳೆಯಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಎನ್ನಬಹುದು. ಆದರೆ ಈ ವಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಕಡಿಮೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ಹಾವೇರಿ

ಆದರೆ ಕೋಲಾರ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ವಾರದ ಆರಂಭದಲ್ಲಿ ಮಳೆಯಿರಲಿದೆ.  ಬಳ್ಳಾರಿ, ರಾಯಚೂರು, ಗದಗ, ಬೀದರ್, ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ ಜಿಲ್ಲೆಗಳಲ್ಲಿ ವಾರದ ಮಧ್ಯಭಾಗದಿಂದ ಮಳೆ ಶುರುವಾಗಲಿದೆ. ಉಳಿದೆಡೆ ಅಲ್ಪಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments