Karnataka Weather: ಈ ಜಿಲ್ಲೆಗಳಲ್ಲಿ ಇಂದು ದಾಖಲೆಯ ಮಟ್ಟಕ್ಕೆ ಏರಲಿದೆ ತಾಪಮಾನ

ಕೃಷ್ಣವೇಣಿ ಕೆ
ಮಂಗಳವಾರ, 14 ಏಪ್ರಿಲ್ 2026 (08:42 IST)
ಬೆಂಗಳೂರು: ರಾಜ್ಯಾದ್ಯಂತ ಈಗ ಉರಿಬಿಸಿಲು ತಾಂಡವವಾಡುತ್ತಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಈ ವರ್ಷದ ಗರಿಷ್ಠ ಮಟ್ಟದ ತಾಪಮಾನ ದಾಖಲಾಗಲಿದೆ ಎನ್ನುತ್ತಿದೆ ಹವಾಮಾನ ವರದಿಗಳು.
 

ಕಳೆದ ವಾರ ಬಿಸಿಲಿನ ನಡುವೆಯೂ ಕೆಲವು ಕಡೆಗಳಲ್ಲಿ ಮಳೆ ತಂಪು ನೀಡಿತ್ತು. ಆದರೆ ಈ ವಾರ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಜನರು ಉರಿಬಿಸಿಲಿಗೆ ತತ್ತರಿಸಿ ಹೋಗುತ್ತಿದ್ದಾರೆ. ಇಂದಂತೂ ತಾಪಮಾನ ವಿಪರೀತ ಏರಿಕೆಯಾಗಲಿದೆ.

ವಿಶೇಷವಾಗಿ ರಾಯಚೂರು, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ. ಉಳಿದಂತೆ ಕೊಪ್ಪಳ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ತಲುಪಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿತ್ತು, ಇಂದೂ ಕೂಡಾ ಅದೇ ವಾತಾವರಣವಿರಲಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಇಂದು 36 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂದು ಪ್ರಿಯಕರನ ಜತೆ ಸೇರಿ ಗಂಡನನ್ನೇ ಮುಗಿಸಿದ ಪಾಪಿ ಪತ್ನಿ

Karnataka Weather: ಕರಾವಳಿ ಭಾಗದಲ್ಲಿ ಬಿಸಿಲ ಧಗೆ, ಆರೋಗ್ಯದ ಬಗ್ಗೆ ಇರಲಿ ಕಾಳಜಿ

ಚಿರತೆಯಿಂದ ಅತ್ತೆಯನ್ನು ಕಾಪಾಡಿದ ಸೊಸೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯಿಂದ ಸಿಕ್ತು ಭಾರೀ ಪ್ರಶಂಸೆ

ಶಸ್ತ್ರಚಿಕಿತ್ಸೆಗೊಳಗಾದ ಪವನ್ ಕಲ್ಯಾಣ್‌, ಕರೆ ಮಾಡಿ ವಿಚಾರಿಸಿದ ನರೇಂದ್ರ ಮೋದಿ

ಶಾಂತಿ ಒಪ್ಪಂದ ದೂರದ ಮಾತು ಎಂದ ಇರಾನ್‌: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ

ಮುಂದಿನ ಸುದ್ದಿ
Show comments