Webdunia - Bharat's app for daily news and videos

Install App

Karnataka Weather: ಬೆಂಗಳೂರಿನಲ್ಲಿ ನಿರೀಕ್ಷೆಯಂತೇ ಬಂದ ಮಳೆ

Krishnaveni K
ಮಂಗಳವಾರ, 11 ಮಾರ್ಚ್ 2025 (18:21 IST)
ಬೆಂಗಳೂರು: ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನತೆಗೆ ಇಂದು ಮಳೆಯ ಆಗಮನ ಖುಷಿಕೊಟ್ಟಿದೆ. ಹವಾಮಾನ ವರದಿಗಳು ನಿಜವಾಗಿದ್ದು ಸಂಜೆ ವೇಳೆಗೆ ಕೆಲವೆಡೆ ಹನಿ ಮಳೆಯಾಗಿದೆ.

ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ವರದಿ ನೀಡಿತ್ತು. ಆದರೆ ಇಂದು ಮಧ್ಯಾಹ್ನದವರೆಗೂ ಕಡು ಬಿಸಿಲು ನೋಡಿ ಜನ ಬೇಸರಿಸಿಕೊಂಡಿದ್ದರು. ಆದರೆ ಇದೀಗ ಹವಾಮಾನ ವರದಿಗಳು ಸುಳ್ಳಾಗಿಲ್ಲ.

ಬಹುತೇಕ ಬೆಂಗಳೂರಿನಲ್ಲಿ ಇದೀಗ ದಟ್ಟ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹನಿ ಮಳೆಯಾಗಿದೆ. ಕೆಆರ್ ಪುರಂ, ಹೆಬ್ಬಾಳ ಮುಂತಾದೆಡೆ ಹನಿ ಮಳೆಯಾಗಿದ್ದು, ಇನ್ನಷ್ಟು ಮೋಡವಿರುವ ಕಾರಣ ಇನ್ನೂ ಮಳೆಯಾಗುವ ಸೂಚನೆಯಿದೆ.

ಬಿಸಲಿನಿಂದ ಕಾದ ಭೂಮಿಗೆ ಮಳೆ ನೀರು ಪನ್ನೀರು ಹಾಕಿದಂತಾಗಿದೆಯಷ್ಟೇ. ಆದರೆ ನಿರೀಕ್ಷೆಯಂತೇ ಮುಂಗಾರು ಪೂರ್ವ ಮಳೆಯಾಗಿದ್ದು ನೋಡಿದರೆ ಹವಾಮಾನ ವರದಿಗಳು ಹೇಳಿದಂತೇ ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments