Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ಏರಿದ ತಾಪಮಾನ, ಬೇಸಿಗೆ ಶುರು

Krishnaveni K
ಸೋಮವಾರ, 3 ಫೆಬ್ರವರಿ 2025 (10:50 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ತಾಪಮಾನ ನಿಧಾನವಾಗಿ ಏರಿಕೆಯಾಗುತ್ತಿದ್ದು ಇದೀಗ ಬೆಂಗಳೂರಿನಲ್ಲಿ ತಾಪಮಾನದಲ್ಲಿ ಭಾರೀ ಬದಲಾವಣೆಯಾಗಿದೆ.

ಕಳೆದ ವಾರ ಕನಿಷ್ಠ ತಾಪಮಾನದಿಂದಾಗಿ ರಾಜ್ಯದ ಹಲವೆಡೆ ವಿಪರೀತ ಚಳಿಯಿತ್ತು. ಆದರೆ ಈಗ ರಾಜ್ಯದ ವಿವಿಧ ಭಾಗದಲ್ಲಿ ವಿಪರೀತ ಏರಿಕೆಯಾಗಿದ್ದು ಬೇಸಿಗೆ ಶುರುವಾಗಿದೆ ಎನ್ನಬಹುದು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬೇಸಿಗೆ ನಿಧಾನವಾಗಿ ಶುರುವಾಗಿದೆ.

ಕಳೆದ ವರ್ಷ ಬೆಂಗಳೂರಿನಲ್ಲಿ ಬೇಸಿಗೆ ಜನರು ಬವಣೆ ಪಡುವಂತೆ ಮಾಡಿತ್ತು. ಒಂದೆಡೆ ಮಳೆಯ ಕೊರತೆ ಇನ್ನೊಂದೆಡೆ ವಿಪರೀತ ಬಿಸಿಲು, ಸೆಖೆಯಿಂದಾಗಿ ಇದು ನಿಜವಾಗಿಯೂ ಬೆಂಗಳೂರು ಹೌದೋ ಅಲ್ಲವೋ ಎನ್ನುವಂತೆ ಮಾಡಿತ್ತು. ಈ ವರ್ಷ ಫೆಬ್ರವರಿಯಲ್ಲೇ ಬೇಸಿಗೆ ಶುರುವಾಗಿದ್ದು, ಈ ಬಾರಿಯೂ ಬೇಸಿಗೆ ಬಿರುಸಾಗುವ ಸೂಚನೆ ಸಿಕ್ಕಿದೆ.

ಸಂಜೆ ಕೊಂಚ ತಂಪು ವಾತಾವರಣ, ಒಣ ಹವೆಯಿದ್ದರೆ ಹಗಲು ಬಿಸಿಲಿನ ಝಳ ವಿಪರೀತವಾಗಿದೆ. ಈ ಬಾರಿ ಫೆಬ್ರವರಿ ತಿಂಗಳಿಗಿಂತ ಸಾಮಾನ್ಯವಾಗಿ ಇರುವುದಕ್ಕಿಂತಲೂ 4-5 ಡಿಗ್ರಿ ಸೆಲ್ಶಿಯಸ್ ನಷ್ಟು ಹೆಚ್ಚು ತಾಪಮಾನ ದಾಖಲಾಗುತ್ತಿದೆ. ಇದೀಗ ತಾಪಮಾನ 29 ಡಿಗ್ರಿಯವರೆಗೆ ತಲುಪಿದ್ದು, ಮಾರ್ಚ್ ವೇಳೆಗೆ ಇನ್ನಷ್ಟು ಏರಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ಮಧ್ಯಾಹ್ನದ ವೇಳೆ ಹೊರಗೆ ಓಡಾಡುವುದನ್ನು ಆದಷ್ಟು ತಪ್ಪಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments