Webdunia - Bharat's app for daily news and videos

Install App

Karnataka Weather: ಅವಧಿಗೆ ಮುನ್ನ ಬೇಸಿಗೆ ಆರಂಭ, ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

Krishnaveni K
ಶುಕ್ರವಾರ, 13 ಫೆಬ್ರವರಿ 2026 (09:02 IST)
ಬೆಂಗಳೂರು: ಈ ಬಾರಿ ಮಳೆಗಾಲ, ಚಳಿಗಾಲ ತೀವ್ರವಾಗಿತ್ತು. ಅದೇ ರೀತಿ ಬೇಸಿಗೆಯೂ ತೀವ್ರವಾಗಿರಲಿದೆ. ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗಲಿದೆ ತಪ್ಪದೇ ಗಮನಿಸಿ.

ಈ ಬಾರಿ ಬೇಸಿಗೆ ಅವಧಿಗಿಂತ ಮುನ್ನವೇ ಕಾಲಿಡಲಿದೆ ಎಂದು ಈಗಾಗಲೇ ಹವಾಮಾನ ವರದಿಗಳು ಹೇಳಿವೆ. ನಿನ್ನೆಯವರೆಗೂ ಬಿಸಿಲಿನ ತಾಪ ಹೆಚ್ಚಾಗಿದ್ದರೂ ಗರಿಷ್ಠ ತಾಪಮಾನ 28-29 ಡಿಗ್ರಿಯಷ್ಟೇ ಇತ್ತು. ಆದರೆ ಇಂದಿನಿಂದ ತಾಪಮಾನದಲ್ಲಿ ದಿಡೀರ್ ಏರಿಕೆಯಾಗಲಿದೆ.

ಫೆಬ್ರವರಿ ಮೂರನೇ ವಾರದಿಂದ ಬೇಸಿಗೆ ಆರಂಭವಾಗಲಿದೆ ಎಂದು ವರದಿಗಳು ಸೂಚನೆ ನೀಡಿವೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ 2-3 ಡಿಗ್ರಿಯಷ್ಟು ಹೆಚ್ಚು ತಾಪಮಾನ ಕಂಡುಬರಲಿದೆ. ಈ ತಿಂಗಳ ಅಂತ್ಯಕ್ಕೆ ಗರಿಷ್ಠ ತಾಪಮಾನ 37 ಡಿಗ್ರಿಯವರೆಗೂ ತಲುಪುವ ಸಾಧ್ಯತೆಯಿದೆ ಎನ್ನಲಾಗಿದೆ.

ಇಂದು ರಾಜ್ಯದ ಗರಿಷ್ಠ ತಾಪಮಾನ 30 ಡಿಗ್ರಿ ದಾಟಲಿದೆ. ಬಿಸಿಲಿನ ಝಳ ಹೆಚ್ಚಾಗಲಿದೆ. ಇಂದು ಕನಿಷ್ಠ ತಾಪಮಾನ ಸರಾಸರಿ 17 ಡಿಗ್ರಿಯಷ್ಟು ಕಂಡುಬರುವುದು. ಗರಿಷ್ಠ ತಾಪಮಾನದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments