Webdunia - Bharat's app for daily news and videos

Install App

Karnataka Weather: ಈ ತಿಂಗಳ ಕೊನೆಯಲ್ಲಿ ಬಿಸಿಲಿನ ತಾಪ ಇಳಿಮುಖ ಸಾಧ್ಯತೆ

Sampriya
ಗುರುವಾರ, 20 ಫೆಬ್ರವರಿ 2025 (19:12 IST)
Photo Courtesy X
ಬೆಂಗಳೂರು: ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು  ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಅವರು ಇಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚೆ ನಡೆಸಲಾಯಿತು.

ಅಧಿಕಾರಿಗಳು ಈ ವೇಳೆ ಸಚಿವರಿಗೆ  ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ ಎಂಬ ಮಾಹಿತಿ ನೀಡಿದರು.

ಪ್ರಸ್ತುವ ವರ್ಷ ಫೆಬ್ರವರಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಈ ಪ್ರಮಾಣ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments