Karnataka Weather: ಇಂದಿನ ಬಿಸಿಲಿನ ಝಳ ಹೆಚ್ಚಳ, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ

Krishnaveni K
ಗುರುವಾರ, 5 ಮಾರ್ಚ್ 2026 (08:39 IST)
ಬೆಂಗಳೂರು: ರಾಜ್ಯದಲ್ಲಿ ಈಗ ಬೇಸಿಗೆಯ ಬೇಗೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಬಿಸಿಲಿನ ಝಳ ಮತ್ತಷ್ಟು ಹೆಚ್ಚಳವಾಗಲಿದ್ದು, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ.
 

ಮಾರ್ಚ್ ನಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದೆ ಎಂದು ಈಗಾಗಲೇ ಹವಾಮಾನ ತಜ್ಞರು ಹೇಳಿದ್ದರು. ಅದೀಗ ಮೊದಲ ವಾರದಲ್ಲೇ ಅನುಭವಕ್ಕೆ ಬರುತ್ತಿದೆ. ಈ ವಾರ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಿದ್ದು ಹಗಲಿಡೀ ವಿಪರೀತ ಬಿಸಿಲು ಕಂಡುಬರುತ್ತಿದೆ.

ನಿನ್ನೆಗೆ ಹೋಲಿಸಿದರೆ ಇಂದು ಗರಿಷ್ಠ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ. ಹಗಲಿಡೀ ಶುಭ್ರ ಆಕಾಶವಿರಲಿದ್ದು, ವಿಪರೀತ ಬಿಸಿಲು ಕಂಡುಬರುವುದು.

ಇಂದು ಮಳೆಯ ಸಾಧ್ಯತೆಯಿಲ್ಲ. ರಾಯಚೂರು, ಬಳ್ಳಾರಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟು ಕಂಡುಬರುವುದು. ಇಂತಹ ವಾತಾವರಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಹೊರಗೆ ಕಾಲಿಡದಿರುವುದೇ ಸೂಕ್ತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಇನ್ನೂ ಮುಗಿದಿಲ್ಲ, ಇರಾನ್‌ಗೆ ವಾರ್ನಿಂಗ್ ಕೊಟ್ಟ ಪ್ರಧಾನಿ ನೆತನ್ಯಾಹು

ಕುಡಿದ ಮತ್ತಿನಲ್ಲಿ ಈ ಪಾಪಿ ತಂದೆ ಪುಟ್ಟ ಮಗುವಿನ ಮೇಲೆ ಮಾಡಿದ ಕೆಲಸಕ್ಕೆ ರಕ್ತ ಕುದಿಯುತ್ತದೆ Video

ಫುಟ್‌ಪಾತ್‌ ವ್ಯಾಪರಿಗಳನ್ನು ತೆರವು ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್‌

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments