Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ರಾಜ್ಯದ ಈ ಜಿಲ್ಲೆಗಳಿಗೆ ಬೇಸಿಗೆ ಶಾಕ್ ನೀಡಿದ ಹವಾಮಾನ ವರದಿ

Krishnaveni K
ಶುಕ್ರವಾರ, 14 ಫೆಬ್ರವರಿ 2025 (09:00 IST)
ಬೆಂಗಳೂರು: ಕರ್ನಾಟಕದ ಹವಾಮಾನ ವರದಿ ಪ್ರಕಾರ ಈ ಬಾರಿ ಬೇಸಿಗೆಯಲ್ಲಿ ತಾಪಮಾನ ದಾಖಲೆ ಏರಿಕೆ ಕಾಣಲಿದ್ದು ಈ ಜಿಲ್ಲೆಗಳಲ್ಲಿ ಹಾಟ್ ಶಾಕ್ ಗ್ಯಾರಂಟಿಯಾಗಿದೆ.

ಈ ವರ್ಷ ಮಳೆಗಾಲ ಚೆನ್ನಾಗಿ ಆಗಿತ್ತು. ಚಳಿಗಾಲವೂ ತಕ್ಕಮಟ್ಟಿಗಿತ್ತು. ಆದರೆ ಬೇಸಿಗೆಯಲ್ಲಿ ಈ ಬಾರಿ ತಾಪಮಾನ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಲಿದೆ ಎಂದು ಹವಾಮಾನ ವರದಿಗಳು ಈಗಾಗಲೇ ಎಚ್ಚರಿಕೆ ನೀಡಿವೆ.

ಅದರಲ್ಲೂ ವಿಶೇಷವಾಗಿ ರಾಜ್ಯದ 15 ಜಿಲ್ಲೆಗಳಿಗೆ ಈ ಬಾರಿ ಬೇಸಿಗೆ ಅಕ್ಷರಶಃ ಶಾಕ್ ನೀಡಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಈ ಬಾರಿ ಗರಿಷ್ಠ ತಾಪಮಾನ 39 ಡಿಗ್ರಿಯವರೆಗೆ ತಲುಪಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಹೇಳಿತ್ತು.

ಇದೀಗ ಬೆಂಗಳೂರು ನಗರ, ಗ್ರಾಮಾಂತರ ಮಾತ್ರವಲ್ಲದೆ, ದಕ್ಷಿಣ ಕನ್ನಡ, ಬಳ್ಳಾರಿ, ಉಡುಪಿ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲೂ ತಾಪಮಾನ ದಾಖಲೆ ಪ್ರಮಾಣಕ್ಕೆ ಏರಿಕೆಯಾಗಲಿದೆ ಎಂದು ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಈ ಬಾರಿ ಬೇಸಿಗೆಯ ಶಾಖ ತಡೆಯಲು ಈಗಲೇ ಸಿದ್ಧರಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments