Select Your Language

Notifications

webdunia
webdunia
webdunia
webdunia

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆ

Karnataka Rains
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಇಂದೂ ಮುಂದುವರಿಯುವ ಸೂಚನೆಯಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ಹವಾಮಾನ ವರದಿ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಂತೂ ನಿನ್ನೆ ಭಾರೀ ಗುಡುಗು ಸಹಿತ ಮಳೆಯಾಗಿತ್ತು. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದ್ದರೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಉರಿಬಿಸಿಲಿನ ವಾತಾವರಣ ಮುಂದುವರಿಯಲಿದೆ.

ವಿಶೇಷವಾಗಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಸೂಚನೆಯಿದೆ.

ಬಳ್ಳಾರಿ, ರಾಯಚೂರು, ಕಲಬುರಗಿ ಜಿಲ್ಲೆಯಲ್ಲಿ ವಿಪರೀತ ತಾಪಮಾನ ಕಂಡುಬರಲಿದೆ. ಅದರಲ್ಲೂ ಕಲಬುರಗಿಯಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ತಲಪಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 35 ಡಿಗ್ರಿಯಷ್ಟಿದೆ. ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವು