Karnataka Weather: ಈ ಜಿಲ್ಲೆಗಳಲ್ಲಿ ಇಂದು ಮೈಸುಡುವ ಬಿಸಿಲು

ಕೃಷ್ಣವೇಣಿ ಕೆ
ಗುರುವಾರ, 16 ಏಪ್ರಿಲ್ 2026 (08:37 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರವಂತೂ ತಾಪಮಾನದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಲಿದೆ.

ಹವಾಮಾನ ತಜ್ಞರ ಪ್ರಕಾರ ಈ ತಿಂಗಳಲ್ಲೇ ದೇಶದ ನಾನಾ ಭಾಗಗಳಲ್ಲಿ ದಾಖಲೆಯ ಮಟ್ಟಕ್ಕೆ ತಾಪಮಾನ ಏರಿಕೆಯಾಗಲಿದೆ. ಅದರ ಮುನ್ಸೂಚನೆ ಎಂಬಂತೆ ಈ ವಾರವೇ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಲೇ ಇದೆ. ನಿನ್ನೆಯಂತೇ ಇಂದೂ ವಿಪರೀತ ಬಿಸಿಲು ಕಂಡುಬರಲಿದೆ.

ಇಂದು ರಾಯಚೂರು, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ. ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವೇ 28-29 ಡಿಗ್ರಿಯಷ್ಟು ಕಂಡುಬರಲಿದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಉರಿಬಿಸಿಲಿನ ವಾತಾವರಣವಿರಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಗರಿಷ್ಠ ತಾಪಮಾನ ಇಂದು 36 ಡಿಗ್ರಿಯಷ್ಟು ಕಂಡುಬರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರದುರ್ಗ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿಯವರೆಗೆ ದಾಖಲಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ಬಿಜೆಪಿ ರಾಜಕೀಯ ಸರ್ಜಿಕಲ್ ಸ್ಟ್ರೈಕ್‌ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಸಂದರ್ಶಕರ ಮೇಲೆ ಕಲ್ಲೆಸೆಯಲು ಮುಂದಾದ ಮರಿ ಚಿಂಪಾಂಜಿ, ತಾಯಿ ಚಿಂಪಾಂಜಿ ಏನ್ ಮಾಡ್ತು ನೋಡಿ, Video

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೊಸ ಇತಿಹಾಸ ಸೃಷ್ಟಿ: ಟಿಎಂಸಿ ವಿರುದ್ಧ ಗುಡುಗಿದ ಮೋದಿ

ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂದು ಪ್ರಿಯಕರನ ಜತೆ ಸೇರಿ ಗಂಡನನ್ನೇ ಮುಗಿಸಿದ ಪಾಪಿ ಪತ್ನಿ

Karnataka Weather: ಕರಾವಳಿ ಭಾಗದಲ್ಲಿ ಬಿಸಿಲ ಧಗೆ, ಆರೋಗ್ಯದ ಬಗ್ಗೆ ಇರಲಿ ಕಾಳಜಿ

ಮುಂದಿನ ಸುದ್ದಿ
Show comments