Webdunia - Bharat's app for daily news and videos

Install App

Karnataka Weather: ಈ ಜಿಲ್ಲೆಗಳಲ್ಲಿ ಇಂದು ಮೈಸುಡುವ ಬಿಸಿಲು

ಕೃಷ್ಣವೇಣಿ ಕೆ
ಗುರುವಾರ, 16 ಏಪ್ರಿಲ್ 2026 (08:37 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರವಂತೂ ತಾಪಮಾನದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಲಿದೆ.

ಹವಾಮಾನ ತಜ್ಞರ ಪ್ರಕಾರ ಈ ತಿಂಗಳಲ್ಲೇ ದೇಶದ ನಾನಾ ಭಾಗಗಳಲ್ಲಿ ದಾಖಲೆಯ ಮಟ್ಟಕ್ಕೆ ತಾಪಮಾನ ಏರಿಕೆಯಾಗಲಿದೆ. ಅದರ ಮುನ್ಸೂಚನೆ ಎಂಬಂತೆ ಈ ವಾರವೇ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಲೇ ಇದೆ. ನಿನ್ನೆಯಂತೇ ಇಂದೂ ವಿಪರೀತ ಬಿಸಿಲು ಕಂಡುಬರಲಿದೆ.

ಇಂದು ರಾಯಚೂರು, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ. ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವೇ 28-29 ಡಿಗ್ರಿಯಷ್ಟು ಕಂಡುಬರಲಿದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಉರಿಬಿಸಿಲಿನ ವಾತಾವರಣವಿರಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಗರಿಷ್ಠ ತಾಪಮಾನ ಇಂದು 36 ಡಿಗ್ರಿಯಷ್ಟು ಕಂಡುಬರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರದುರ್ಗ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿಯವರೆಗೆ ದಾಖಲಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments