Webdunia - Bharat's app for daily news and videos

Install App

Karnataka Weather: ಅಬ್ಬಾ.. ಇಂದು ಈ ಜಿಲ್ಲೆಗಳಲ್ಲಿ ರಣ ಭೀಕರ ಬಿಸಿಲು

Krishnaveni K
ಬುಧವಾರ, 8 ಏಪ್ರಿಲ್ 2026 (08:51 IST)
ಬೆಂಗಳೂರು: ರಾಜ್ಯದಲ್ಲಿ ಈಗ ಬೇಸಿಗೆ ರುದ್ರತಾಂಡವವಾಡುತ್ತಿದೆ. ಇಂದಂತೂ ಈ ಕೆಲವು ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಲಿದ್ದು, ಬಿಸಿಲಿನಿಂದ ಹೈರಾಣಾಗಲಿದ್ದೀರಿ.

ಈ ವಾರಂತ್ಯಕ್ಕೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಆದರೆ ಇಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿನ ವಾತಾವರಣ ಕಂಡುಬರಲಿದೆ. ಇಂದು ಯಾವುದೇ ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿಲ್ಲ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಆದರೆ ವಿಜಯಪುರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಂತೂ ಇಂದು ಗರಿಷ್ಠ ತಾಪಮಾನ 38 ಡಿಗ್ರಿಯಷ್ಟು ತಲುಪಲಿದ್ದು ವಿಪರೀತ ಬಿಸಿಲಿನ ವಾತಾವರಣವಿರಲಿದೆ. ಇನ್ನು ಉತ್ತರ ಕನ್ನಡ, ಬೀದರ್, ಗದಗ, ಕೊಪ್ಪಳ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟು ಕಂಡುಬರುವುದು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಹೊರಗೆ ಕಾಲಿಡಲಾಗದಷ್ಟು ಉರಿಬಿಸಿಲು ಕಂಡುಬರುತ್ತಿದ್ದು ಇಂದು ಗರಿಷ್ಠ ತಾಪಮಾನ 34 ಡಿಗ್ರಿಯಷ್ಟು ಕಂಡುಬರಲಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಇಂದು 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 22 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments