Select Your Language

Notifications

webdunia
webdunia
webdunia
webdunia

Karnataka Weather: ಇಂದಿನ ರಾಜ್ಯದ ಹವಾಮಾನ ವರದಿ ಇಲ್ಲಿದೆ

Bengaluru weather
ಬೆಂಗಳೂರು: ರಾಜ್ಯದಲ್ಲಿ ಈಗ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ಇಂದಿನ ಹವಾಮಾನ ವರದಿ.

ರಾಜ್ಯದಲ್ಲಿ ಈಗ ಹಗಲು ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಿಗ್ಗೆ 10 ರಿಂದ ಸಂಜೆ 3 ಗಂಟೆಯವರೆಗೆ ಹೊರಗೆ ಕಾಲಿಡಲಾಗದಷ್ಟು ಬಿಸಿಲಿನ ಝಳ ಕಂಡುಬರುತ್ತಿದೆ. ಆದರೆ ರಾತ್ರಿ ಚಳಿಯೂ ಇರುವುದರಿಂದ ಹೆಚ್ಚು ಸೆಖೆ ಕಂಡುಬರುತ್ತಿಲ್ಲ.

ಇಂದು ಕೆಲವೆಡೆ ಭಾಗಶಃ ಮೋಡ ಕವಿದ ಮತ್ತು ಬಿಸಿಲಿನ ವಾತಾವರಣವಿರಲಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ ಇಂದು 29 ಡಿಗ್ರಿಗೆ ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ವಿಪರೀತ ಬಿಸಿಲು ಕಂಡುಬರುತ್ತಿದ್ದು ರಾತ್ರಿ ಸಣ್ಣ ಮಟ್ಟಿಗಿನ ಚಳಿ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿಗೆ ಏರಿಕೆಯಾಗಲಿದೆ. ಬಳ್ಳಾರಿ, ಬೀದರ್, ರಾಯಚೂರು, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಡ್ಯ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿಯಷ್ಟಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು