Webdunia - Bharat's app for daily news and videos

Install App

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಮುಂದಿನ ಆರು ದಿನ ಎಚ್ಚರಿಕೆ

Krishnaveni K
ಸೋಮವಾರ, 8 ಜುಲೈ 2024 (10:13 IST)
ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಈಗಲೂ ಮಳೆ ಜೋರಾಗಿಯೇ ಮುಂದುವರಿದಿದೆ. ಇಂದೂ ಕೂಡಾ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಸಾಕಷ್ಟು ಮಳೆಯಾಗಿರುವುದರ ಸೂಚನೆಯಾಗಿದೆ.

ಆದರೆ ಬೆಂಗಳೂರಿನಲ್ಲಿ ಮಾತ್ರ ಯಾಕೋ ನಿರೀಕ್ಷಿಸಿದ ಮಳೆಯಿಲ್ಲ. ರಾಜ್ಯದಲ್ಲಿ ಮೊದಲು ಮಳೆ ಬಂದಿದ್ದೇ ಬೆಂಗಳೂರಿನಲ್ಲಿ. ಆದರೆ ಈಗ ಇಲ್ಲಿ ಸಾಕಷ್ಟು ಮಳೆಯಾಗುತ್ತಿಲ್ಲ. ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುತ್ತಿದೆ. ಇಂದಿನ ಗರಿಷ್ಠ ತಾಪಮಾನ 28 ಡಿಗ್ರಿಯಾಗಿದ್ದರೆ ಕನಿಷ್ಠ ತಾಪಮಾನ 20.5 ಡಿಗ್ರಿಯಷ್ಟಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಚಿತ್ರದುರ್ಗ, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮುಂದಿನ 6 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments