Webdunia - Bharat's app for daily news and videos

Install App

ಕರ್ನಾಟಕ ಲೇಟೆಸ್ಟ್ ಹವಾಮಾನ ವರದಿ: ಜುಲೈ 13 ರ ಬಳಿಕ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Krishnaveni K
ಗುರುವಾರ, 11 ಜುಲೈ 2024 (09:44 IST)
ಬೆಂಗಳೂರು: ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಜುಲೈ 13 ರ ನಂತರ ಈ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆಯೂ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಿನ್ನೆ ಅಪರಾಹ್ನ ಮಳೆಯಾಗಿದೆ. ಇಂದೂ ಕೂಡಾ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡಿನಲ್ಲೂ ಮಳೆ ಮುಂದುವರಿಯಲಿದೆ.

ಜುಲೈ 13 ರ ನಂತರ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ಬೆಳಗಾವಿ, ಬೀದರ್, ರಾಯಚೂರು, ಕಲಬುರಗಿ, ಹಾಸನ, ಚಿಕ್ಕಮಗಳೂರು, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ.

ಇದಲ್ಲದೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಇಂದು ಗರಿಷ್ಠ ಉಷ್ಣಾಂಶ 26 ಡಿಗ್ರಿಯಷ್ಟಿದೆ. ಕನಿಷ್ಠ ಉಷ್ಣಾಂಶ 18 ಡಿಗ್ರಿಯಷ್ಟು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಮುಂದಿನ ಸುದ್ದಿ
Show comments