Webdunia - Bharat's app for daily news and videos

Install App

ಕರ್ನಾಟಕದಲ್ಲಿ ಭಾರೀ ಮಳೆ: ಈ ಪ್ರಮುಖ ರಸ್ತೆಗಳು ಬಂದ್

Krishnaveni K
ಶುಕ್ರವಾರ, 19 ಜುಲೈ 2024 (09:35 IST)
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ರಸ್ತೆಗಳು ಬಂದ್ ಆಗಿವೆ. ಮುಂದಿನ ನಾಲ್ಕೈದು ದಿನಗಳವರೆಗೆ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಜುಲೈ 24 ರವರೆಗೆ ಮಳೆಯ ವಾತಾವರಣ ಮುಂದುವರಿಯಲಿದೆ. ಶಿರೂರಿನಲ್ಲಿ ನಡೆದ ಗುಡ್ಡು ಕುಸಿತ ದುರಂತ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಇನ್ನು ಮಂಗಳೂರು-ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ, ಚಾರ್ಮಾಡಿ ಘಾಟಿಗಳಲ್ಲೂ ಗುಡ್ಡ ಕುಸಿತದ ಭೀತಿಯಿದೆ.

ಕೇವಲ ದಕ್ಷಿಣದ ಕರಾವಳಿ ಭಾಗದಲ್ಲಿ ಮಾತ್ರವಲ್ಲ, ಉತ್ತರದಲ್ಲಿ ಕಾರವಾರದಲ್ಲೂ ಗುಡ್ಡ ಕುಸಿತದ ಪ್ರಕರಣ ವರದಿಯಾಗಿದೆ. ಇದರಿಂದಾಗಿ ಕುಮಟಾ ಮತ್ತು ಕಾರವಾರ ನಡುವಿನ ರಸ್ತೆ ಬಂದ್ ಆಗಿದೆ. ಮನೆ ಮೇಲೆ ಗುಡ್ಡ ಕುಸಿತದಿಂದಾಗಿ ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು ವಿಮಾನ ನಿಲ್ದಾಣದ ಪಕ್ಕ ಆದ್ಪಾಡಿ ಬಳಿ ರನ್ ವೇ ಸಮೀಪ ಗುಡ್ಡ ಕುಸಿತವಾಗಿದ್ದು ರಸ್ತೆ ಬಂದ್ ಮಾಡಲಾಗಿದೆ. ಭಾರೀ ಮಳೆ, ಗುಡ್ಡ ಕುಸಿತದ ಭೀತಿಯಿಂದಾಗಿ ಶಿರಾಡಿ ಘಾಟ್ ಬಂದ್ ಮಾಡಲಾಗಿದೆ. ಸಕಲೇಶಪುರ-ಮಾರನಹ್ಳಿ ಚತುಷ್ಪಥ ನಿರ್ಮಾಣಕ್ಕೆ ಮಳೆ ಅಡ್ಡಿಯಾಗಿದೆ. ಸುಮಾರು 7 ಕ್ಕೂ ಹೆಚ್ಚು ಹೆದ್ದಾರಿಗಳಲ್ಲಿ ಗುಡ್ಡ ಕುಸಿತದ ಭೀತಿಯಿದ್ದು ಸಂಚಾರ ಸ್ಥಗಿತಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments