Webdunia - Bharat's app for daily news and videos

Install App

ಕರ್ನಾಟಕ ಹವಾಮಾನ ವರದಿ: ಮುಂದಿನ ಮೂರು ದಿನಗಳ ಕಾಲ ಈ ಕಾರಣಕ್ಕೆ ಎಚ್ಚರ

Krishnaveni K
ಗುರುವಾರ, 19 ಡಿಸೆಂಬರ್ 2024 (10:49 IST)
ಬೆಂಗಳೂರು: ಕರ್ನಾಟಕದಲ್ಲಿ ಮಳೆ, ಮೋಡ ಕವಿದ ವಾತಾವರಣ ಜೊತೆಗೆ ವಿಪರೀತ ಚಳಿ ಎಲ್ಲವೂ ಒಂದೇ ದಿನ ಕಂಡುಬರುತ್ತಿದೆ. ಮುಂದಿನ ಮೂರು ದಿನಗಳ ಕಾಲ ಈ ಕಾರಣಕ್ಕೆ ಎಚ್ಚರವಾಗಿರಬೇಕು ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯ ರಾಜಧಾನಿಯಲ್ಲಿ ನಿನ್ನೆ ರಾತ್ರಿ ಸಣ್ಣ ಮಳೆಯಾಗಿದೆ. ಬೆಳಿಗ್ಗೆ ಕೊಂಚ ಮೋಡ ಕವಿದ ವಾತಾವರಣವಿತ್ತು. ಇಂದೂ ಮೋಡ ಕವಿದ ವಾತಾವರಣ, ಶೈತ್ಯ ಹವಾಗುಣ ಮುಂದುವರಿಯುವ ನಿರೀಕ್ಷೆಯಿದೆ. ಜೊತೆಗೆ ವಿಪರೀತ ಚಳಿಯ ವಾತಾವರಣವಿದೆ.

ಇನ್ನು, ಉತ್ತರ ಕರ್ನಾಟಕದಲ್ಲಿ ವಿಪರೀತ ಚಳಿಯಿರಲಿದ್ದು, ಮುಂದಿನ ಮೂರು ದಿನಗಳ ಕಾಲ ಶೀತ ಅಲೆಯಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್ ನಲ್ಲಿ ಶೀತ ಅಲೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆದಷ್ಟು ಮುಂಜಾನೆ ಮತ್ತು ಮುಸ್ಸಂಜೆಯ ಹೊತ್ತಿನಲ್ಲಿ ಹೊರಗೆ ಓಡಾಡದೇ ಇರುವುದು ಉತ್ತಮ ಎನ್ನಲಾಗಿದೆ.

ತಾಪಮಾನ ಇದ್ದಕ್ಕಿದ್ದಂತೆ 7 ಡಿಗ್ರಿಗೆ ಇಳಿಕೆಯಾಗಿದ್ದು ಅಪಾಯಕಾರಿಯಾಗಿದೆ. ಸೂರ್ಯೋದಯಕ್ಕೆ ಮುನ್ನ ಅಥವಾ ಸೂರ್ಯಾಸ್ತದ ಬಳಿಕ ವಾಕಿಂಗ್ ಮಾಡುವುದು ಸೂಕ್ತವಲ್ಲ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ವಿಪರೀತ ಚಳಿಯಿಂದ ರಕ್ಷಿಸಿಕೊಳ್ಳಲು ಜನ ರಸ್ತೆ ಬದಿಯಲ್ಲೇ ಬೆಂಕಿ ಹಚ್ಚಿ ಗುಂಪು ಗುಂಪಾಗಿ ಚಳಿ ಕಾಯಿಸುವ ಪರಿಸ್ಥಿತಿಯಿದೆ. ಮುಂದಿನ ಮೂರು ದಿನಗಳ ಕಾಲ ಈ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments