ಕರ್ನಾಟಕದಲ್ಲಿ ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಅಬ್ಬರ

Krishnaveni K
ಶನಿವಾರ, 27 ಜುಲೈ 2024 (10:58 IST)
ಬೆಂಗಳೂರು: ಕರಾವಳಿ ಜಿಲ್ಲೆಗಳ ಬಳಿಕ ಈಗ ಉತ್ತರ ಕರ್ನಾಟಕದಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರದದಲ್ಲಿ ಸುರಿಯುತ್ತಿರುವ ಭಾರೀ ಮಳೆ ಕರ್ನಾಟಕದ ಉತ್ತರ ಭಾಗಕ್ಕೂ ತಟ್ಟಿದೆ.

ಇಷ್ಟು ದಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ರಾಜ್ಯದ ಬಹುತೇಕ ಡ್ಯಾಮ್ ಗಳು ಭರ್ತಿಯಾಗಿದ್ದು, ನದಿಗಳು ಉಕ್ಕಿ ಹರಿಯುತ್ತದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿ ತಟದ ಜನರಿಗೆ ಆತಂಕ ಶುರುವಾಗಿದೆ.

ಇಂದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ ಮೊದಲಾದೆಡೆ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಧಾರವಾಡ, ಬೆಳಗಾವಿಯಲ್ಲೂ ಭಾರೀ ಮಳೆಯಾಗುತ್ತಿದೆ. ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾರವಾರ, ಅಂಕೋಲಾ, ಭಟ್ಕಳ, ದಾಂಡೇಲಿ, ಯಲ್ಲಾಪುರ, ಶಿರಸಿ, ಶಿವಮೊಗ್ಗ ಮುಂತಾದೆಡೆ ನಿನ್ನೆ ಭಾರೀ ಮಳೆ ಸುರಿದಿದ್ದು ಇಂದೂ ಮಳೆ ಮುಂದುವರಿದಿದೆ. ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುತ್ತಿದೆ. ಮಳೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಗರಿಷ್ಠ ತಾಪಮಾನದ ನಡುವೆಯೂ ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಎನ್‌ಡಿಎ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ಅಂಬಾನಿಯನ್ನು ಹಿಂದಿಕ್ಕಿ ಮತ್ತೇ ಶ್ರೀಮಂತ ವ್ಯಕ್ತಿಯಾದ ಅದಾನಿ

ವಿಶ್ವದ ಮೊದಲ ಏರ್‌ ಟ್ಯಾಕ್ಸಿ ನಿಲ್ದಾಣ ದುಬೈನಲ್ಲಿ

ಮುಸ್ಲಿಂರಿಗೆ ಕಾಂಗ್ರೆಸ್ ಸಹಾಯ ಮಾಡಿದ್ದಷ್ಟು ಬೇರೆ ಯಾರೂ ಮಾಡಿಲ್ಲ: ಡಿಕೆಶಿ

ಮುಂದಿನ ಸುದ್ದಿ
Show comments