Webdunia - Bharat's app for daily news and videos

Install App

ಕರ್ನಾಟಕದಲ್ಲಿ ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಅಬ್ಬರ

Krishnaveni K
ಶನಿವಾರ, 27 ಜುಲೈ 2024 (10:58 IST)
ಬೆಂಗಳೂರು: ಕರಾವಳಿ ಜಿಲ್ಲೆಗಳ ಬಳಿಕ ಈಗ ಉತ್ತರ ಕರ್ನಾಟಕದಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರದದಲ್ಲಿ ಸುರಿಯುತ್ತಿರುವ ಭಾರೀ ಮಳೆ ಕರ್ನಾಟಕದ ಉತ್ತರ ಭಾಗಕ್ಕೂ ತಟ್ಟಿದೆ.

ಇಷ್ಟು ದಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ರಾಜ್ಯದ ಬಹುತೇಕ ಡ್ಯಾಮ್ ಗಳು ಭರ್ತಿಯಾಗಿದ್ದು, ನದಿಗಳು ಉಕ್ಕಿ ಹರಿಯುತ್ತದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿ ತಟದ ಜನರಿಗೆ ಆತಂಕ ಶುರುವಾಗಿದೆ.

ಇಂದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ ಮೊದಲಾದೆಡೆ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಧಾರವಾಡ, ಬೆಳಗಾವಿಯಲ್ಲೂ ಭಾರೀ ಮಳೆಯಾಗುತ್ತಿದೆ. ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾರವಾರ, ಅಂಕೋಲಾ, ಭಟ್ಕಳ, ದಾಂಡೇಲಿ, ಯಲ್ಲಾಪುರ, ಶಿರಸಿ, ಶಿವಮೊಗ್ಗ ಮುಂತಾದೆಡೆ ನಿನ್ನೆ ಭಾರೀ ಮಳೆ ಸುರಿದಿದ್ದು ಇಂದೂ ಮಳೆ ಮುಂದುವರಿದಿದೆ. ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುತ್ತಿದೆ. ಮಳೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments