Publish Date: Wed, 05 Feb 2025 (09:44 IST)
Updated Date: Wed, 05 Feb 2025 (09:48 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಹವಾಮಾನದ ಬಗ್ಗೆ ಜನರು ಎಚ್ಚರವಾಗಿರಬೇಕು. ಅದಕ್ಕೆ ಕಾರಣವೇನು, ಹವಾಮಾನದ ಲೇಟೆಸ್ಟ್ ವರದಿ ಏನು ಇಲ್ಲಿದೆ ಡೀಟೈಲ್ಸ್.
ಕಳೆದ ಎರಡು ವಾರಗಳಿಂದ ಕರ್ನಾಟಕದ ಹವಾಮಾನದಲ್ಲಿ ಸಣ್ಣ ಮಟ್ಟಿಗೆ ಬದಲಾವಣೆ ಕಂಡುಬರುತ್ತಲೇ ಇದೆ. ಒಣ ಹವೆ ಮುಂದುವರಿದಿದ್ದು, ಚಳಿ ನಿಧಾನವಾಗಿ ಕಡಿಮೆಯಾಗುತ್ತಿದೆ. ಅತ್ತ ಬೇಸಿಗೆಗೆ ಕಾಲಿಡುವ ಲಕ್ಷಣ ಕಂಡುಬರುತ್ತಿದೆ.
ವಿಶೇಷವಾಗಿ ಹಗಲು ಹೊತ್ತಿನಲ್ಲಿ ವಿಪರೀತ ಬಿಸಿಲಿನ ಝಳ ಕಂಡುಬರುತ್ತಿದೆ. ಇದರಿಂದಾಗಿ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಇದೀಗ ಇಂದು ಮತ್ತು ನಾಳೆ ತಾಪಮಾನದಲ್ಲಿ ಮತ್ತಷ್ಟು ಏರಿಕೆ ಕಂಡುಬರಲಿದೆ.
ವಿಶೇಷವಾಗಿ ಇಂದು, ನಾಳೆ ಹಗಲು ಬಿಸಿಲಿನ ತಾಪ ವಿಪರೀತ ಎನಿಸುವಷ್ಟು ಇರಲಿದೆ. ಹೀಗಾಗಿ ಮಧ್ಯಾಹ್ನದ ಹೊತ್ತು ಹೊರಗೆ ಓಡಾಡುವುದಕ್ಕೆ ಕಡಿವಾಣ ಹಾಕಿದರೆ ಉತ್ತಮ. ಇಂದು ಮತ್ತು ನಾಳೆ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಶಿಯಸ್ ತಲುಪುವ ಸಾಧ್ಯತೆಯಿದೆ ಎನ್ನಲಾಗಿದೆ.