Select Your Language

Notifications

webdunia
webdunia
webdunia
webdunia

Karnataka Weather: ಇಂದು ಬಿಸಿಲು ಹೆಚ್ಚಾಗಲಿದೆ, ಆದರೆ ಇಲ್ಲಿದೆ ಟ್ವಿಸ್ಟ್

Karnataka Rains

Krishnaveni K

ಬೆಂಗಳೂರು , ಮಂಗಳವಾರ, 17 ಫೆಬ್ರವರಿ 2026 (08:38 IST)
ಬೆಂಗಳೂರು: ರಾಜ್ಯಾದ್ಯಂತ ಈಗ ಬಿಸಿಲಿನ ಬೇಗೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ನಡುವೆಯೂ ಹವಾಮಾನದಲ್ಲಿ ಇಂದು ಒಂದು ಬದಲಾವಣೆ ಕಂಡುಬರಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ.
 

ರಾಜ್ಯದಲ್ಲಿ ಈಗ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಹಗಲು ವಿಪರೀತ ಬಿಸಿಲಿನ ಝಳ ಕಂಡುಬರುತ್ತಿದೆ. ಮಧ್ಯಾಹ್ನದ ವೇಳೆಗೆ ಹೊರಗೆ ಕಾಲಿಡಲೂ ಆಗದಷ್ಟು ಬಿಸಿಲಿರುತ್ತದೆ. ಹಾಗಿದ್ದರೂ ಇನ್ನೂ ಚಳಿ ಕಡಿಮೆಯಾಗಿಲ್ಲ ಎನ್ನುವುದೇ ವಿಶೇಷ.

ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 30 ಡಿಗ್ರಿಯಿರಲಿದೆ. ಹಗಲು ವಿಪರೀತ ಬಿಸಿಲು ಕಂಡುಬರುವುದು. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಶುಭ್ರ ಆಕಾಶವಿರಲಿದೆ. ಹಾಗಿದ್ದರೂ ಇಂದು ಕನಿಷ್ಠ ತಾಪಮಾನ ಸರಾಸರಿ 16 ಡಿಗ್ರಿಯಷ್ಟಿರಲಿದ್ದು ಇದರಿಂದಾಗಿ ಚಳಿಯೂ ತೀವ್ರವಾಗಿರಲಿದೆ ಎನ್ನುವುದೇ ಇಂದಿನ ಹವಾಮಾನದಲ್ಲಿ ಟ್ವಿಸ್ಟ್.

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಇನ್ನಷ್ಟು ತೀವ್ರವಾಗಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ತಲುಪಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಾಗಲಿದೆ. ಆದರೆ ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ 15 ಡಿಗ್ರಿಗೆ ಇಳಿಕೆಯಾಗಲಿದೆ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿಗೆ ಏರಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ