Webdunia - Bharat's app for daily news and videos

Install App

ಕರ್ನಾಟಕ ಹವಾಮಾನ ವರದಿ: ಹವಾಮಾನ ಇಲಾಖೆಯ ಈ ಎಚ್ಚರಿಕೆ ಗಮನಿಸಿ

Krishnaveni K
ಶುಕ್ರವಾರ, 3 ಜನವರಿ 2025 (09:57 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಮಳೆ ಮಾಯವಾಗಿದ್ದು ಚಳಿಯ ವಾತಾವರಣ ಕಂಡುಬರುತ್ತಿದೆ. ಹವಾಮಾನ ಇಲಾಖೆ ನಾಗರಿಕರಿಗೆ ಈ ಎಚ್ಚರಿಕೆ ನೀಡಿದ್ದು ತಪ್ಪದೇ ಗಮನಿಸಿ.

ಕಳೆದ ವಾರ ಕೆಲವೆಡೆ ವಾಯಭಾರ ಕುಸಿತದಿಂದ ತುಂತುರು ಮಳೆಯಾಗಿತ್ತು. ಆದರೆ ಈಗ ಬಿಸಿಲು, ಮಂಜು, ಮೋಡ ಕವಿದ ವಾತಾವರಣವಿರುತ್ತದೆ. ಇದರೊಂದಿಗೆ ಚಳಿ ಹೆಚ್ಚಾಗಿದ್ದು, ಕೆಲವೆಡೆ ತಾಪಮಾನ ವಿಪರೀತ ಎನಿಸುವಷ್ಟು ಇಳಿಕೆಯಾಗಿದೆ.

ವಿಶೇಷವಾಗಿ ಕರ್ನಾಟಕದ ಉತ್ತರ ಭಾಗದಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕೆಲವು ದಿನ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಾಳೆಯವರೆಗೂ ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ. ಬಳಿಕ ಒಣ ಹವೆ ಮುಂದುವರಿಯಲಿದೆ ಎನ್ನಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿಯಿದ್ದರೆ ಕನಿಷ್ಠ ತಾಪಮಾನ 15 ಡಿಗ್ರಿಗೆ ಇಳಿಕೆಯಾಗಿದೆ. ತುಮಕೂರಿನಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿ, ಶಿವಮೊಗ್ಗದಲ್ಲಿ 14 ಡಿಗ್ರಿಗೆ ಬಂದಿದೆ. ಉಳಿದಂತೆ ಬೀದರ್, ಕಲಬುರಗಿ, ಧಾರವಾಡ, ಹಾವೇರಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರಿದಿದೆ. ಮುಂದಿನ ಕೆಲವು ದಿನಗಳ ಕಾಲ ಇದೇ ತಾಪಮಾನ ಮುಂದುವರಿಯಲಿದ್ದು ವಯೋವೃದ್ಧರು ಆದಷ್ಟು ಸಂಜೆ ಮತ್ತು ಬೆಳಿಗ್ಗೆನ ಹೊತ್ತು ಹೊರಗಡೆ ಓಡಾಡುವುದನ್ನು ಕಡಿಮೆ ಮಾಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments