Select Your Language

Notifications

webdunia
webdunia
webdunia
webdunia

Karnataka Weather: ಇಂದಿನಿಂದ ರಾಜ್ಯದ ಹವಾಮಾನ ಬದಲಾವಣೆ ಗಮನಿಸಿ

Karnataka Rain

Krishnaveni K

ಬೆಂಗಳೂರು , ಶುಕ್ರವಾರ, 28 ಮಾರ್ಚ್ 2025 (08:44 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕೆಲವೆಡೆ ಮಳೆಯಾಗಿತ್ತು. ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಹೇಗಿರಲಿದೆ ಇಲ್ಲಿದೆ ವರದಿ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕಳೆದ ವಾರ ಮಳೆಯಾಗಿತ್ತು. ಮುಂಗಾರು ಪೂರ್ವ ಮಳೆಯಿಂದಾಗಿ ಗರಿಷ್ಠ ತಾಪಮಾನದಲ್ಲಿ ಕೊಂಚ ಇಳಿಕೆಯಾಗಿತ್ತು. ಹಾಗಿದ್ದರೂ ಉತ್ತರದ ಜಿಲ್ಲೆಗಳಲ್ಲಿ ತಾಪಮಾನ ಎಂದಿನಂತೇ ಮುಂದುವರಿದಿತ್ತು.

ಆದರೆ ಇಂದಿನಿಂದ ಕೆಲವು ದಿನ ರಾಜ್ಯದಲ್ಲಿ ಮಳೆಯ ಸೂಚನೆಯಿಲ್ಲ. ಕೆಲವೆಡೆ ಮೋಡ ಕವಿದ ವಾತಾವರಣ ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮತ್ತೆ ಹೆಚ್ಚಾಗಲಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ 34 ಡಿಗ್ರಿಯವರೆಗೆ ತಲುಪುವ ನಿರೀಕ್ಷೆಯಿದೆ.

ಮಳೆಯ ಸಿಂಚನದ ಖುಷಿಯಲ್ಲಿದ್ದ ದಕ್ಷಿಣ ಕನ್ನಡದಲ್ಲಂತೂ ತಾಪಮಾನ 36 ಡಿಗ್ರಿ ದಾಟಲಿದೆ. ವಿಶೇಷವಾಗಿ ಇನ್ನು ಎರಡು ದಿನ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗಲಿದೆ. ಬಹುತೇಕ ಜಿಲ್ಲೆಗಳಲ್ಲಿ ಇದೇ ಸ್ಥಿತಿಯಾಗಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಬಳಿಕ ಮೊದಲ ಬಾರಿ ಪತ್ನಿ ಜತೆ ಸಂಸತ್‌ನಲ್ಲಿ ಕಾಣಿಸಿಕೊಂಡ ತೇಜಸ್ವಿ ಸೂರ್ಯ