Webdunia - Bharat's app for daily news and videos

Install App

Karnataka weather: ವಾರಂತ್ಯಕ್ಕೆ ಹೇಗಿರಲಿದೆ ಕರ್ನಾಟಕದ ಹವಾಮಾನ

Krishnaveni K
ಶನಿವಾರ, 7 ಮಾರ್ಚ್ 2026 (08:28 IST)
ಬೆಂಗಳೂರು: ರಾಜ್ಯದಲ್ಲಿ ಈಗ ಬಿರು ಬಿಸಿಲು ಜನರನ್ನು ಹೈರಾಣಾಗಿಸಿದೆ. ಈ ವಾರಂತ್ಯಕ್ಕೆ ರಾಜ್ಯದಲ್ಲಿ ಮಳೆ ಸೂಚನೆಯಿದೆಯೇ, ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ.

ರಾಜ್ಯದಲ್ಲಿ ಪ್ರಸ್ತುತ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು  ಹೊರಗೆ ಕಾಲಿಡಲಾಗದಷ್ಟು ಬಿಸಿಲಿನ ವಾತಾವರಣವಿದೆ. ಬೆಳಿಗ್ಗೆ 10 ರಿಂದ ಸಂಜೆ 3 ರವರೆಗೆ ಹೊರಗೆ ಕಾಲಿಡದಿರುವುದೇ ಸೂಕ್ತ ಎನ್ನುವಂತಹ ವಾತಾವರಣವಿದೆ.

ಈ ವಾರ ಎಲ್ಲೂ ಮಳೆಯಾಗಿರಲಿಲ್ಲ. ವಾರಂತ್ಯದಲ್ಲೂ ಯಾವುದೇ ಜಿಲ್ಲೆಗೆ ಮಳೆಯ ಸೂಚನೆಯಿಲ್ಲ. ಬದಲಾಗಿ ಈ ವಾರಂತ್ಯಕ್ಕೆ ಮತ್ತಷ್ಟು ಬಿಸಿಲು ಕಂಡುಬರಲಿದೆ. ವಾರಂತ್ಯಕ್ಕೆ ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟು ಕಂಡುಬರಲಿದ್ದು ಕನಿಷ್ಠ ತಾಪಮಾನ 19 ಡಿಗ್ರಿ ಆಸುಪಾಸಿನಲ್ಲಿರಲಿದೆ. ಈ ವಾರವಿಡೀ ಇದೇ ವಾತಾವರಣವಿತ್ತು.

ರಾಯಚೂರು, ಬಳ್ಳಾರಿ, ಕಲಬುರಗಿ, ಉತ್ತರ ಕನ್ನಡ, ಹುಬ್ಬಳ್ಳಿ, ಧಾರವಾಡ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ತಲುಪಲಿದೆ. ಉಳಿದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33-35 ಡಿಗ್ರಿಯ ಆಸುಪಾಸಿನಲ್ಲಿರಲಿದೆ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಶುಭ್ರ ಆಕಾಶವಿರಲಿದ್ದು ಹಗಲಿಡೀ ಬಿಸಿಲು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಜೈಲು ಹಕ್ಕಿಯಾದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಅಸ್ತು

ಮುಂದಿನ ಸುದ್ದಿ
Show comments