Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಈ ದಿನದವರೆಗೆ ಗಾಳಿ ಸಹಿತ ಮಳೆ

Sampriya
ಗುರುವಾರ, 3 ಏಪ್ರಿಲ್ 2025 (20:04 IST)
ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಸಿಲ ಬೇಗೆಯಿಂದ ಸುಸ್ತಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಇಂದು ಬೆಳ್ಳಂಬೆಳಗ್ಗೆನೆ ವರುಣನ ಆಗಮನವಾಗಿದೆ. ನಗರದ ಹಲವೆಡೆ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗಿದೆ.

ಮಳೆಯಿಂದಾಗಿ ಹಲವೆಡೆ ಮರಗಳು ಧರೆಗುರುಳಿದ್ದು ಮನೆಗಳು, ಕಾರುಗಳು ಜಖಂಗೊಂಡಿವೆ. ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಸವಾರರು ವಾಹನ ಚಲಾಯಿಸಲು ಪರದಾಡಿದರು. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇದೇ ಭಾನುವಾರದವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಬೆಳಗ್ಗೆಯಷ್ಟೇ ಹವಾಮಾನ ಇಲಾಖೆ ಬೆಂಗಳೂರು ನಗರಕ್ಕೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ವರದಿ ನೀಡಿತ್ತು.

ಇದರ ಬೆನ್ನಲ್ಲೇ ಬೆಂಗಳೂರಿನಾದ್ಯಂತ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನ ಪ್ರಮುಖ ಪ್ರದೇಶಗಳಾದ ವಿಧಾನಸೌಧ, ಶಿವಾಜಿ ನಗರ, ಹೆಚ್ಎಸ್ ಆರ್ ಲೇಔಟ್, ಕೆಆರ್ ಮಾರುಕಟ್ಟೆ, ಚಾಮರಾಜಪೇಟೆ, ಬಸವನಗುಡಿ, ಜಯನಗರ, ಆರ್ ಆರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments