Webdunia - Bharat's app for daily news and videos

Install App

ಗೂಂಡಾ ಕಾಯ್ದೆಯಡಿ ನಗರದ ಕಾರ್ತಿಕ್ ಅಲಿಯಾಸ್ ಉಲ್ಲಾಳು ಕಾರ್ತಿಕ್‌ನನ್ನು ಬಂಧಿಸಲು ಹೊರಡಿಸಿದ ಆದೇಶ

Webdunia
ಶುಕ್ರವಾರ, 15 ಅಕ್ಟೋಬರ್ 2021 (21:51 IST)
ಬೆಂಗಳೂರು: ಗೂಂಡಾ ಕಾಯ್ದೆಯಡಿ ನಗರದ ಕಾರ್ತಿಕ್ ಅಲಿಯಾಸ್ ಉಲ್ಲಾಳು ಕಾರ್ತಿಕ್‌ನನ್ನು ಬಂಧಿಸಲು ಹೊರಡಿಸಿದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ 25 ಸಾವಿರ ರೂ. ದಂಡ ವಿಧಿಸಿದೆ.
ಗೂಂಡಾ ಕಾಯ್ದೆಯಡಿ ತನ್ನನ್ನು ಬಂಧಿಸಲು ನಗರ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶ ಮತ್ತು ಅದನ್ನು ಅನುಮೋದಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಕಾರ್ತಿಕ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಕಾರ್ತಿಕ್‌ನನ್ನು ಗುಂಡಾ ಕಾಯ್ದೆಯಡಿ ಬಂಧಿಸಲು 2020ರ ಡಿ.14ರಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದರು. ಆ ಕುರಿತು ವಿಚಾರಣೆ ನಡೆಸಿದ ಸಲಹಾ ಸಮಿತಿ ಎದುರು ಹಾಜರಾಗಿದ್ದ ಕಾರ್ತಿಕ್ ಸಲಹಾ ಸಮಿತಿ, ಗೂಂಡಾ ಕಾಯ್ದೆಯಡಿ ಬಂಧಿಸಲು ಹೊರಡಿಸಿರುವ ಆದೇಶ ಸರಿಯಲ್ಲ. ಅದನ್ನು ಪರಿಗಣಿಸಬಾರದು ಎಂದು ಕೋರಿ 2021ರ ಜ.12ರಂದು ಮನವಿ ಸಲ್ಲಿಸಿದ್ದ. ಆ ಮನವಿ ಪತ್ರವನ್ನು ಸಲಹಾ ಸಮಿತಿ ಪರಿಗಣಿಸಿರಲಿಲ್ಲ. ಸಮಿತಿಯ ವರದಿ ಆಧರಿಸಿದ ಸರ್ಕಾರವು ಕಾರ್ತಿಕ್‌ನನ್ನು ಗೂಂಡಾ ಕಾಯ್ದೆಯಡಿ ಒಂದು ವರ್ಷದವರೆಗೆ ಬಂಧಿಸಲು ನಗರ ಪೊಲೀಸರು ಹೊರಡಿಸಿದ ಆದ್ದೇಶವನ್ನು 2021ರ ಜ.30ರಂದು ಅನುಮೋದಿಸಿತ್ತು.
ಆದರೆ, ಸರ್ಕಾರವು ಈ ಅರ್ಜಿಗೆ ಮೊದಲ ಬಾರಿಗೆ ಸಲ್ಲಿಸಿದ ಆಕ್ಷೇಪಣೆಯ ಜತೆಗೆ ಕಾರ್ತಿಕ್ ಮನವಿ ಪತ್ರವನ್ನೂ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ನಂತರ ಸಲ್ಲಿಸಿದ ಹೆಚ್ಚುವರಿ ಆಕ್ಷೇಪಣೆಯಲ್ಲಿ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಬಸವರಾಜ್ ಅವರ ಪ್ರಮಾಣ ಪತ್ರ ಒದಗಿಸಿ, ಸಲಹಾ ಸಮಿತಿಗೆ ಮನವಿ ಪತ್ರ ಸಲ್ಲಿಸಿರುವ ಬಗ್ಗೆ ಕಾರ್ತಿಕ್ ಯಾವುದೇ ಮಾಹಿತಿ ನೀಡಿಲ್ಲ ಎಂದು ತಿಳಿಸಿದೆ. ಸರ್ಕಾರದ ಈ ನಡೆ ನಿಜಕ್ಕೂ ವಿಚಿತ್ರವಾಗಿದೆ. ಸಿಸಿಬಿ ಇನ್ಸ್‌ಪೆಕ್ಟರ್ ಸಾಮಾನ್ಯವಾಗಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments