Webdunia - Bharat's app for daily news and videos

Install App

ಶುಕ್ರವಾರ ಸ್ಥಬ್ಧವಾಗಲಿದೆ ಕರುನಾಡು

Webdunia
ಬುಧವಾರ, 27 ಸೆಪ್ಟಂಬರ್ 2023 (21:00 IST)
ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿರುವುದನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಗೆ ಆಭೂತಪೂರ್ವ ಬೆಂಬಲ ಸಿಕ್ಕಿತ್ತು. ಬಂದ್‌ ಯಶಸ್ವಿಯಾದ ಬೆನ್ನಲ್ಲೆ ಕನ್ನಡಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‌ಗೆ ಸಿದ್ದತೆ ನಡೆಸಿವೆ. ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೊರ್ಟ್ ಹಾಗೂ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಮಾಡಿರುವ ಆದೇಶವನ್ನು ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಸೆ.29ರಂದು ರಾಜ್ಯ ಬಂದ್‌ಗೆ ಕರೆ ನೀಡಿವೆ. ಸೆ.29ರಂದು ಕರ್ನಾಟಕ ಬಂದ್ ಮಾಡಿ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಬೇಕು ಹಾಗೂ ಬಂದ್ ವೇಳೆ ಕಾವೇರಿ ವಿಚಾರವಷ್ಟೇ ಅಲ್ಲದೆ ಮಹದಾಯಿ ಮತ್ತು ಮೇಕೆದಾಟು ವಿಚಾರದ ಬಗ್ಗೆಯೂ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments