KAS ಅಧಿಕಾರಿ ವರ್ಷಾ ಒಡೆಯರ್‌ ಬಂಧನ

Webdunia
ಬುಧವಾರ, 16 ನವೆಂಬರ್ 2022 (17:43 IST)
ಜಮೀನಿನ ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕೆಎಎಸ್‌ ಅಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್​ಕುಮಾರ್‌ ಎಂಬುವವರಿಂದ 2 ಎಕರೆ ಜಮೀನು ಖರೀದಿಸಿದ್ದರು. ಆದರೆ, ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ ಪರವಾಗಿ ಕಾಂತರಾಜು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಹಣಿಯಲ್ಲಿ ಲಲಿತ್‌ ಹೆಸರು ನಮೂದಿಸುವಂತೆ ಉಪ ವಿಭಾಗಾಧಿಕಾರಿ ನ್ಯಾಯಾಲಯ ಅ.22ರಂದು ಆದೇಶ ಹೊರಡಿಸಿತ್ತು. ಉಪ ವಿಭಾಗಾಧಿಕಾರಿ ಆದೇಶದಂತೆ ಪಹಣಿ ತಿದ್ದುಪಡಿಗೆ ಕಾಂತರಾಜು ಅರ್ಜಿ ಸಲ್ಲಿಸಿದ್ದರು. ಪ್ರತಿ ಎಕರೆಗೆ ₹ 5 ಲಕ್ಷದಂತೆ  ₹ 10 ಲಕ್ಷ ಲಂಚ ನೀಡುವಂತೆ ವಿಶೇಷ ತಹಶೀಲ್ದಾರ್‌ ಮಧ್ಯವರ್ತಿ ರಮೇಶ್‌ ಮೂಲಕ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ‘ಮಂಗಳವಾರ ಸಂಜೆ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ ವಾಹನ ನಿಲುಗಡೆ ತಾಣದ ಬಳಿ ಬಂದು ಹಣ ತಲುಪಿಸುವಂತೆ ಮಧ್ಯವರ್ತಿ ಸೂಚಿಸಿದ್ದರು. ಅಲ್ಲಿಗೆ ತೆರಳಿದ ಕಾಂತರಾಜು ₹5 ಲಕ್ಷ ನೀಡಿದರು. ತಕ್ಷಣ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ರಮೇಶ್‌ ಅವರನ್ನು ಬಂಧಿಸಿದರು. ‘ನನ್ನದೇನೂ ತಪ್ಪಿಲ್ಲ. ತಹಶೀಲ್ದಾರ್‌ ವರ್ಷಾ ಅವರ ಸೂಚನೆಯಂತೆ ಹಣ ಪಡೆದಿದ್ದೇನೆ’ ಎಂದು ಮಧ್ಯವರ್ತಿ ತನಿಖಾ ತಂಡಕ್ಕೆ ಉತ್ತರಿಸಿದರು. ಅಲ್ಲಿಂದ ವಾಪಸ್‌ ವಿಶೇಷ ತಹಶೀಲ್ದಾರ್‌ ಕಚೇರಿಗೆ ಬಂದ ರಮೇಶ್‌, ‘ಮೇಡಂ ವ್ಯವಹಾರ ಮುಗಿದಿದೆ’ ಎಂದರು. ‘ಹಣ ಕೊಡು’ ಎಂದು ವರ್ಷಾ ₹5 ಲಕ್ಷ ಪಡೆದುಕೊಂಡರು’ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments