Publish Date: Mon, 20 Feb 2023 (07:29 IST)
Updated Date: Mon, 20 Feb 2023 (09:31 IST)
ಮಡಿಕೇರಿ : ಕಾಂಗ್ರೆಸಿಗರ ಕಿವಿ ಮೇಲೆ ಹೂ ಅಭಿಯಾನವನ್ನು ಟೀಕಿಸುವ ಭರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಹೇಳಿದ್ದಾರೆ.
ಮಡಿಕೇರಿಯ ವಿರಾಜಪೇಟೆಯಲ್ಲಿ ಕೊಡವ ಭಾಷಿಕರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಚೆನ್ನಾಗಿ ಆಡಳಿತ ಮಾಡಿದ್ದರೆ ಭಾರತ ಭಿಕ್ಷುಕರ, ಸಾಲಗಾರರ ರಾಷ್ಟ್ರ ಆಗುತ್ತಿರಲಿಲ್ಲ.
ಇಡೀ ದೇಶದ ಜನತೆಯ ಕಿವಿಗೆ ಹೂ ಇಟ್ಟು ಬದುಕಿದ ಕಾಂಗ್ರೆಸ್, ಸ್ವಾತಂತ್ರ್ಯ ನಂತರವೂ ಅದನ್ನೇ ಮಾಡಿದೆ. ಬಿಜೆಪಿಯ ಒಳ್ಳೆ ಕೆಲಸ ಸಹಿಸಲಾಗದೆ ಕಾಂಗ್ರೆಸ್ನವರು ಹೂ ಇಟ್ಟುಕೊಂಡಿದ್ದರು, ಮುಂದೆ ಹೂ ಇಟ್ಟುಕೊಂಡೇ ಬದುಕಬೇಕು ಎಂದು ವ್ಯಂಗ್ಯವಾಡಿದರು.