Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಬೆಂಗಳೂರಿನಲ್ಲಿ ಆಘೋಷಿತ ಬಂದ್

ಕಾವೇರಿ ವಿವಾದ
ಬೆಂಗಳೂರು , ಸೋಮವಾರ, 12 ಸೆಪ್ಟಂಬರ್ 2016 (13:41 IST)
ತಮಿಳುನಾಡಿಗೆ ಸೆಪ್ಟೆಂಬರ್ 20 ರವರೆಗೆ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಬೆಂಗಳೂರಿನಲ್ಲಿ ಅಘೋಷಿತ ಬಂದ್ ಉಂಟಾಗಿದೆ.
 
ಸುಪ್ರೀಂಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ವರ್ತಕರು ಸ್ವಯಂಪ್ರೇರಣೆಯಿಂದ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
 
ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಉಗ್ರ ಪ್ರತಿಭಟನೆಗಿಳಿದಿವೆ. ಬೆಂಗಳೂರು, ಮೈಸೂರು, ಮಂಡ್ಯ, ಹುಬ್ಬಳ್ಳಿ ನಗರಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ.
 
ಶಾಲಾ ಕಾಲೇಜುಗಳಿಗೆ ಮಧ್ಯಾಹ್ನದಿಂದಲೇ ರಜೆ ಘೋಷಿಸಲಾಗಿದ್ದು, ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಮನೆಗಳಿಗೆ ಕಳುಹಿಸಲು ಅಡಳಿತ ಮಂಡಳಿಗಳು ಹರಸಾಹಸ ಪಡುತ್ತಿವೆ.
 
ಕನ್ನಡ ಪರ ಹೋರಾಟಗಾರರು ರಸ್ತೆ ಮಧ್ಯದಲ್ಲಿ ಬೆಂಕಿಹಚ್ಚಿ ರಸ್ತೆ ತಡೆ ನಡೆಸಿದ್ದಲ್ಲದೇ ತಮಿಳುನಾಡು ಮೂಲದ ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕೆಲವೆಡೆ ಪೊಲೀಸರು ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ ಘಟನೆಯೂ ವರದಿಯಾಗಿದೆ. 
 
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿರುವ ಪ್ರತಿಭಟನಾಕಾರರು, ರಾಜ್ಯದಲ್ಲಿರುವ ತಮಿಳರ ಮೇಲೆ ಕೂಡಾ ಹಲ್ಲೆ ನಡೆಸಲಾಗುವುದು ಎಂದು ಕರವೇ ಮುಖಂಡರು ಈಗಾಗಲೇ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿಗೆ ಹೋದರೂ ಪರವಾಗಿಲ್ಲ, ಒಂದು ಹನಿ ನೀರು ಬಿಡಬಾರದು: ಎಚ್‌.ಡಿ.ಕುಮಾರಸ್ವಾಮಿ