Select Your Language

Notifications

webdunia
webdunia
webdunia
webdunia

ಜೈಲಿಗೆ ಹೋದರೂ ಪರವಾಗಿಲ್ಲ, ಒಂದು ಹನಿ ನೀರು ಬಿಡಬಾರದು: ಎಚ್‌.ಡಿ.ಕುಮಾರಸ್ವಾಮಿ

ಕನ್ನಡ ಪ್ರಾದೇಶಿಕ
ಬೆಂಗಳೂರು , ಸೋಮವಾರ, 12 ಸೆಪ್ಟಂಬರ್ 2016 (12:58 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೊಮ್ಮೆ ಮುಖಭಂಗವಾಗಿರುವ ಹಿನ್ನೆಲೆಯಲ್ಲಿ ದೇಶದ ಒಕ್ಕೂಟದ ವ್ಯವಸ್ಥೆಯಲ್ಲಿ ಇಂದು ಅತ್ಯಂತ ಕರಾಳ ದಿನ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಜೈಲಿಗೆ ಹೋದರು ಪರವಾಗಿಲ್ಲ ಕಾವೇರಿ ನದಿಯಿಂದ ತಮಿಳುನಾಡಿಗೆ ಒಂದು ಹನಿಯೂ ನೀರು ಬಿಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಏನಾಗುತ್ತಿದೆಯೋ ತಿಳಿಯುತ್ತಿಲ್ಲ. ತೀರ್ಪು ನೀಡುವವರ ಮೇಲೆ ಅನುಮಾನ ಮೂಡುತ್ತಿದೆ. ತೀರ್ಪು ನೀಡುವವರೇ ರಾಜ್ಯಕ್ಕೆ ಬಂದು ಡ್ಯಾಂಗಳ ನೀರಿನ ಮಟ್ಟ ಪರಿಶೀಲನೆ ಮಾಡಲಿ ಎಂದು ಆಗ್ರಹಿಸಿದರು.
 
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಪದೆ ಪದೇ ತಮಿಳುನಾಡಿನ ಪರವಾಗಿ ತೀರ್ಪು ನೀಡುವುದರಿಂದ ಜನರಿಗೆ ನ್ಯಾಯಾಧೀಕರಣದ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಿಗರ ಮೇಲೆ ನಡೆದ ದೌರ್ಜನ್ಯ: ತಮಿಳುನಾಡಿಗೆ ಸಿಎಂ ವಾರ್ನಿಂಗ್