Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ತಮಿಳುನಾಡಿನಿಂದ ಸುಪೀಂ ಕೋರ್ಟ್‌ಗೆ ಮನವಿ

ಕನ್ನಡ ಪ್ರಾದೇಶಿಕ
ಬೆಂಗಳೂರು , ಸೋಮವಾರ, 22 ಆಗಸ್ಟ್ 2016 (15:59 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ಮಂಡಳಿ ಆದೇಶ ಪಾಲನೆಗೆ ಸೂಚಿಸುವಂತೆ ಕೋರಿ ತಮಿಳುನಾಡು ಸರಕಾರ ಸುಪೀಂ ಕೋರ್ಟ್ ಮೋರೆ ಹೋಗಿದೆ.
 
ಕೆಆರ್‌ಎಸ್ ನದಿಯಿಂದ 50 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುಲು ಕರ್ನಾಟಕ ಸರಕಾರಕ್ಕೆ ಸೂಚಿಸುವಂತೆ ಕೋರಿ ಇಂದು ತಮಿಳುನಾಡು ಸರಕಾರ ಸುಪೀಂ ಕೋರ್ಟ್ ಮೋರೆ ಹೋಗಿದೆ.
 
ಕಾವೇರಿ ನದಿಯಿಂದ 10 ದಿನಗಳಲ್ಲಿ 50 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರಕಾರ ಮನವಿ ಮಾಡಿಕೊಂಡಿದೆ. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಮಿಳುನಾಡು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ತಿಳಿಸಿದ್ದರು. ಜೂನ್ ಮತ್ತು ಜುಲೈ ತಿಂಗಳಲ್ಲಿ ನಮಗೆ ಸಲ್ಲಬೇಕಾಗಿದ್ದ ನೀರನ್ನು ಕರ್ನಾಟಕ ರಾಜ್ಯ ನೀಡಿಲ್ಲ. ಈ ಕುರಿತು ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಗೋವಾದಲ್ಲಿ ಆಪ್- ಬಿಜೆಪಿ ನೇರ ಹಣಾಹಣಿ; ಕಾಂಗ್ರೆಸ್‌ಗೆ ಶೂನ್ಯ : ಕೇಜ್ರಿವಾಲ್