Select Your Language

Notifications

webdunia
webdunia
webdunia
webdunia

ಸಹಜ ಸ್ಥಿತಿಗೆ ಮರಳುತ್ತಿರುವ ಮಹಾನಗರಿ ಬೆಂಗಳೂರು

ಸಹಜ ಸ್ಥಿತಿಗೆ ಮರಳುತ್ತಿರುವ ಮಹಾನಗರಿ ಬೆಂಗಳೂರು
ಬೆಂಗಳೂರು , ಮಂಗಳವಾರ, 13 ಸೆಪ್ಟಂಬರ್ 2016 (18:49 IST)
ಕಾವೇರಿ ಪ್ರತಿಭಟನೆಯಿಂದ ತತ್ತರಿಸಿಹೋಗಿದ್ದ ಮಹಾನಗರಿ ಬೆಂಗಳೂರು ಇದೀಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಬಸ್, ಅಟೋ ಸಂಚಾರ ಆರಂಭವಾಗಿದೆ.
 
ನಿನ್ನೆ ಬೆಳಿಗ್ಗೆಯಿಂದ ಬಸ್ ಸಂಚಾರವನ್ನು ರದ್ದುಗೊಳಿಸಿದ್ದರಿಂದ ದೂರದಿಂದ ಬಂದಂತಹ ಪ್ರಯಾಣಿಕರು ಪರದಾಡುವಂತಾಗಿತ್ತು. ಇದೀಗ ಬಸ್ ಸಂಚಾರ ಆರಂಭಗೊಂಡಿದ್ದರಿಂದ ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ.
 
ನಗರಾದ್ಯಂತ ಅಂಗಡಿ ಮುಗ್ಗಟ್ಟುಗಳು ತೆರೆಯಲಾಗಿದ್ದು, ಸಾರ್ವಜನಿಕರು ಅಗತ್ಯವಾದ ವಸ್ತುಗಳನ್ನು ಖರೀದಿಸಲು ಮುಗಿಬಿದ್ದಿದ್ದಾರೆ. ಮತ್ತೆ ಕಾವೇರಿ ಹೋರಾಟ ಆರಂಭವಾದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ತೊಂದರೆಯಾಗಬಹುದು ಎನ್ನುವ ಆತಂಕವನ್ನು ಹೊಂದಿದ್ದಾರೆ.
 
ನಾಳೆಯಿಂದ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ನಗರದಿಂದ ಎಲ್ಲಾ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ದೇವೇಗೌಡರ ನೇತೃತ್ವದಲ್ಲಿ ಹೇಮಾವತಿ ಜಲಾಶಯಕ್ಕೆ ಮುತ್ತಿಗೆ