Webdunia - Bharat's app for daily news and videos

Install App

ಕಾವೇರಿ ಹೋರಾಟ ಮತ್ತಷ್ಟು ತೀವ್ರ, ಪ್ರತಿಭಟನೆಗೆ ತಾರಾ ಮೆರುಗು

Webdunia
ಗುರುವಾರ, 8 ಸೆಪ್ಟಂಬರ್ 2016 (10:29 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಬಳಿಕ ರಾಜ್ಯಾದ್ಯಂತ ಕಾವೇರಿ ಹೋರಾಟ ತೀವ್ರಗೊಳ್ಳುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಹೋರಾಟಗಾರರು ಪ್ರತಿಭಟನೆ ವ್ಯಕ್ತಪಡಿಸಿದರು. ಜಯಲಲಿತಾ ಹಠಮಾರಿ ಧೋರಣೆ  ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ 15ಕ್ಕೂ ಹೆಚ್ಚು ಲಾರಿಗಳನ್ನು ತಡೆದು ಪ್ರತಿಭಟನೆ ವ್ಯಕ್ತಪಡಿಸಿದರು.

ರಾಜ್ಯಸರ್ಕಾರ ತಕ್ಷಣ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಈ ನಡುವೆ ಪ್ರತಿಭಟನೆಗೆ ತಾರಾಮೆರಗು ಕೂಡ ಸೇರಿದ್ದು, ನಟ, ನಿರ್ದೇಶಕ ಜೋಗ್ ಪ್ರೇಮ್ ಕೂಡ ಪಾಲ್ಗೊಂಡಿದ್ದಾರೆ. ಪ್ರೇಮ್ ಜತೆ ಗಾಂಧಿ ನಗರದ ಚಿತ್ರತಂಡ ಪ್ರತಿಭಟನೆಯಲ್ಲಿ ಭಾಗಿಯಾಗಿದೆ.  ಈ ನಡುವೆ ರೈತರನ್ನು ಸಮಾಧಾನಪಡಿಸಲು ರೈತರ ಜಮೀನುಗಳಿಗೆ ನಾಲೆಗಳಿಂದ ನೀರನ್ನು ಹರಿಸಲಾಗುತ್ತಿದೆ.

 
ಈಗ ಲಭ್ಯವಿರುವ ಮಾಹಿತಿ ಪ್ರಕಾರ ನಾಲೆಗಳಿಗೆ 5000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆಯೆಂದು ತಿಳಿದುಬಂದಿದೆ. ಆದರೆ ಮುಂದೆ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಸರ್ಕಾರ ಹೇಗೆ ನಿಭಾಯಿಸುತ್ತದೆ ಎನ್ನುವುದೇ ಪ್ರಶ್ನಾರ್ಥಕವಾಗಿದೆ.

ಈ ನಡುವೆ ಕಾವೇರಿಗೆ ಹೇಮಾವತಿ ನೀರು ಹರಿಸಿದ್ದಕ್ಕೆ ಶಾಸಕ ಎಚ್.ಡಿ. ರೇವಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರೇವಣ್ಣ ಇತರೆ ಶಾಸಕರೊಂದಿಗೆ ಡಿಸಿ ಕಚೇರಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದು, ಇಂದು ಹೇಮಾವತಿ ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿ ತಿಳಿಸಿದರು. ಅಹಿತಕರ ಘಟನೆ ನಡೆದರೆ ಜಿಲ್ಲಾಡಳಿತವೇ ಹೊಣೆ ಎಂದು ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments