Webdunia - Bharat's app for daily news and videos

Install App

ಕಾವೇರಿ (ನದಿ)ಗೂ ರಮ್ಯಾಗೂ ಜಯಾಗೂ ಮುಡಿದೋದ ಮನಸು.. ..

Webdunia
ಸೋಮವಾರ, 12 ಸೆಪ್ಟಂಬರ್ 2016 (20:22 IST)
ಕಾವೇರಮ್ಮ ಕಾಪಾಡಮ್ಮ, ಕನ್ನಡ ನಾಡಿನ ಜೀವನದಿ ಕಾವೇರಿ...' ಮುಂತಾಗಿ ಸಿನಿಮಾಗಳಲ್ಲಿ ಹಾಡುತ್ತ, ಕನ್ನಡ ಬಾವುಟ ಹಿಡಿಯುತ್ತಿದ್ದ ಚಿತ್ರರಂಗದ ಖ್ಯಾತ ನಟಿ ರಮ್ಯ, ಮನಬಂದಂತೆ ಹೇಳಿಕೆ ನೀಡುತ್ತಾ ಸಾಗಿರುವುದು ಕಾವೇರಿ ಪುತ್ರರ ಆಕ್ರೋಶಕ್ಕೆ ಕಾರಣವಾಗಿದೆ.
ಕಾವೇರಿ ಜೀವನದಿಯ ಮಹತ್ವ ಅರಿಯದೆ, ರೈತರ ಸಂಕಷ್ಟಗಳಿಗೆ ಸ್ಪಂದಿಸದೆ. ಹೇಳಿಕೆ ನೀಡುತ್ತಿರುವುದು ಕಾವೇರಿ ಕಣಿವೆಯಲ್ಲಿನ ಜನತೆಯ ವಿರೋಧಕ್ಕೆ ತುತ್ತಾಗಿದ್ದಾರೆ.  
 
ಮಂಡ್ಯ ಜಿಲ್ಲೆಯ ಸಂಸದೆಯಾಗಿ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸದೆ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಿ ಕಾಣೆಯಾಗಿದ್ದಾರೆ. ಭದ್ರತೆಯ ದೃಷ್ಟಿಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಪೊಲೀಸರು ಭದ್ರತೆ ನೀಡಿದಲ್ಲಿ ಪ್ರತಿಭಟನೆಗೆ ಸಿದ್ದ ಎಂದು ಬೊಗಳೆ ಬಿಡುತ್ತಿರುವುದು ರೈತರು ಕೆಂಗೆಣ್ಣಿಗೆ ಗುರಿಯಾಗಿದೆ.
 
ನಮ್ಮ ಸರಕಾರ ರೈತರ ಪರವಾಗಿದೆ. ರೈತರಿಗೆ ನೀರು ಬಿಡಲು ಸರಕಾರ ಸಿದ್ದವಿದೆ. ಒಂದು ವೇಳೆ, ನೀರು ಹರಿಸದಿದ್ದಲ್ಲಿ ಪರಿಹಾರ ಕೊಡಲು ಸರಕಾರ ಸಿದ್ದವಿದೆ ಎಂದು ಅಜ್ಞಾನಿಯಂತೆ ಹೇಳಿಕೆ ನೀಡುವ ರಮ್ಯಗೆ ಕಾವೇರಿ ಜೀವನದಿಯಿಂದ ಎಷ್ಟು ಹೆಕ್ಟೆರ್ ಭೂಮಿಗೆ ನೀರುಣಿಸಲಾಗುತ್ತದೆ ಎನ್ನುವ ಅಲ್ಪ ತಿಳುವಳಿಕೆಯಾದರೂ ಇದೆಯೇ? 
 
ಮತ್ತೊಂದೆಡೆ ಇದು ಶಾಂತ ಸ್ವಭಾವದ ಕನ್ನಡಿಗರು ಮತ್ತು ತಮಿಳರ ನಡುವೆ ದ್ವೇಷ ಹೆಚ್ಚಿಸಿ ರಾಜಕೀಯದ ಬೆಳೆ ಬೇಯಿಸಿಕೊಳ್ಳುವುದು ತಮಿಳುನಾಡು ಮುಖ್ಯಮಂತ್ರಿ ಅಮ್ಮ ಎಂದು ಕರೆಸಿಕೊಳ್ಳುವ ಜಯಲಲಿತಾಗೆ ಗೌರವ ತರುವುದಿಲ್ಲ.
 
ಕಾವೇರಿ ವಿವಾದದಲ್ಲಿ ಕರ್ನಾಟಕ ನ್ಯಾಯಾಲಯದಲ್ಲಿ ಪದೇ ಪದೇ ಸೋಲುತ್ತಿರುವುದು ವಿಷಾದನೀಯವಾಗಿದೆ. ಎಂತಹ ವಿಚಿತ್ರವೆಂದರೆ, ಅಕ್ರಮ ಆಸ್ತಿಗಳಿಕೆಯ ವಿಚಾರದಲ್ಲಿ ಜಯಲಲಿತಾ ಪರ ವಕೀಲತ್ತು ವಹಿಸಿದ್ದ ಫಾಲಿ ನಾರಿಮನ್ ಕರ್ನಾಟಕದ ಪರ ವಕೀಲ!!. 
 
ಸುಪ್ರೀಂ ಕೋರ್ಟಿನಲ್ಲಿ ಜಯಲಲಿತಾ ಪರ ವಕೀಲನೊಬ್ಬ ಮತ್ತೊಂದು ವಿಚಾರದಲ್ಲಿ ಜಯಲಲಿತಾ ವಿರುದ್ಧ ವಾದಿಸುತ್ತಾರೆ ಎಂದರೆ ನಂಬಲು ಸಾಧ್ಯವೇ? ಕಳೆದ 32 ವರ್ಷಗಳಿಂದ ರಾಜ್ಯಕ್ಕೆ ನ್ಯಾಯಾಲಯದಲ್ಲಿ ಸೋಲಾಗುತ್ತಿದ್ದರೂ ಅವರನ್ನೇ ಮುಂದುವರಿಸುವ ರಾಜಕಾರಣಿಗಳಿಗೆ ಏನನ್ನಬೇಕು?
 
ಕಳೆದ 32 ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಸರಕಾರಗಳು ರಾಜ್ಯದಲ್ಲಿ ಸರಕಾರ ನಡೆಸಿವೆ. ಆದರೆ, ಮಹಾಮೇಧಾವಿಗಳು ಎನಿಸಿಕೊಂಡ ಯಾರೊಬ್ಬರು ಕಾವೇರಿ ವಿವಾದವನ್ನು ಇತ್ಯರ್ಥಗೊಳಿಸಲು ನಿಟ್ಟಿನಲ್ಲಿ ರಾಜಕೀಯ ಇಚ್ಚಾಶಕ್ತಿ ತೋರದಿರುವುದು ವಿಪರ್ಯಾಸ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments